ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು!

ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು ನೀಡಿದ್ದಾರೆ. ನ್ಯಾಯಾಲಯ ಅದನ್ನು ಅಂಗೀಕರಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ. ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದಾರೆ ಎಂದು ಅರ್ಜಿದಾರ ಸುಧೀರ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ಭಾಷಣದ ನಂತರ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ ಎಂದು ಓಜಾ ಪ್ರತಿಪಾದಿಸಿದ್ದಾರೆ.
ಸೋನಿಯಾ ಗಾಂಧಿ ಹೇಳಿದ್ದೇನು?

ದ್ರೌಪದಿ ಮುರ್ಮು ಅವರ ಭಾಷಣದ ನಂತರ ಪತ್ರಕರ್ತರ ಬಳಿ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ರಾಷ್ಟ್ರಪತಿಗಳ ಭಾಷಣ ಬೋರಿಂಗ್ ಆಗಿತ್ತು. ಭಾಷಣದ ಕೊನೆಯಲ್ಲಿ ‘ಪೂವರ್ ಲೇಡಿ’ ದಣಿದಿದ್ದರು ಎಂದಿದ್ದರು. ಸೋನಿಯಾ ಗಾಂಧಿ ಈ ಹೇಳಿಕೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಹಾಜರಿದ್ದರು. ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ದುರದೃಷ್ಟಕರ ಮತ್ತು ಅವಮಾನಕರ ಹೇಳಿಕೆ ಎಂದು ರಾಷ್ಟ್ರಪತಿ ಭವನ ಕೂಡ ಹೇಳಿದೆ.

ಕಾಂಗ್ರೆಸ್ ರಾಜಮನೆತನದ ದುರಹಂಕಾರ: ಮೋದಿ

ಸೋನಿಯಾ ಗಾಂಧಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಇಂದು ದೇಶವು ಮತ್ತೆ ಕಾಂಗ್ರೆಸ್ ರಾಜಮನೆತನದ ದುರಹಂಕಾರವನ್ನು ನೋಡಿದೆ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಭಾರತದ ಸಾಧನೆಗಳು ಮತ್ತು ದೂರದೃಷ್ಟಿಯ ಬಗ್ಗೆ ದೇಶವಾಸಿಗಳಿಗೆ ತಿಳಿಸಿದರು. ಹಿಂದಿ ಅವರ ಮಾತೃಭಾಷೆಯಲ್ಲ, ಆದರೂ ಅವರು ಅತ್ಯುತ್ತಮ ಭಾಷಣ ಮಾಡಿದರು. ಆದರೆ ಕಾಂಗ್ರೆಸ್ನ ರಾಜಮನೆತನದವರು ಅವರನ್ನು ಅವಮಾನಿಸಿದರು ಎಂದು ಮೋದಿ ಹೇಳಿದ್ದಾರೆ. ಕಾಂಗ್ರೆಸ್ನವರು ರಾಷ್ಟ್ರಪತಿಗಳನ್ನು ಪೂವರ್ ಲೇಡಿ ಎಂದು ಕರೆದಿದ್ದಾರೆ. ದಣಿದವರು ಎಂದು ಜರೆದಿದ್ದಾರೆ. ಇದು ದೇಶದ ಆದಿವಾಸಿ ಸಹೋದರ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!