ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಶೂಟ್ ವೇಳೆ ಅರಣ್ಯಕ್ಕೆ ಹಾನಿ? ಗ್ರಾಮಸ್ಥರ ಆಕ್ರೋಶ .

ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಆರೋಪದಿಂದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪರಿಸರ ಹಾನಿ ಹಾಗೂ ವನ್ಯಜೀವಿಗಳಿಗೆ ಉಂಟಾಗಬಹುದಾದ ಅಪಾಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
‘ಕಾಂತಾರ’ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ 2’ ಮಾಡುವ ಆಸಕ್ತಿ ತೋರಿಸಿತು. ರಿಷಬ್ ಶೆಟ್ಟಿ ಅವರು ಹೊಸ ಕಥೆಯೊಂದಿಗೆ ಎರಡನೇ ಪಾರ್ಟ್ ಮಾಡಲು ರೆಡಿ ಆಗಿದ್ದಾರೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ತಮ್ಮ ಹುಟ್ಟೂರಿಗೆ ಶಿಫ್ಟ್ ಆಗಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಈ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು,
‘ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬ ಮಾಹಿತಿ ಕೊಡಬೇಕು. ಅರಣ್ಯ, ಕಂದಾಯ ಇಲಾಖೆಯವರು ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ಸದ್ಯ ಕಾಡಿನಲ್ಲಿ ಬೆಂಕಿ ಹಚ್ಚಿದ್ದರಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎನ್ನಲಾಗಿದೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು ಎಂಬುದು ಗ್ರಾಮಸ್ಥರ ಆಗ್ರಹ. ‘ಕೂಡಲೇ ಶೂಟಿಂಗ್ ಸ್ಥಗಿತಗೊಳಿಸಿ ಪರಿಸರ ಉಳಿಸಿ. ಇಲ್ಲವಾದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!