ರೈಟ್ ರೈಟ್ … ಫೈನ್ ಬಿದ್ದರೂ ನಿಲ್ಲದ ನೋಟ್ಬುಕ್ ಸೆಲೆಬ್ರೇಷನ್ ಆಲ್ರೈಟ್ ಅಂತಾರೆ ದಿಗ್ವೇಶ್….

ಬಿಸಿಸಿಐ ದಿಗ್ವೇಶ್ ರಾಥಿಯವರಿಗೆ ಮೊದಲನೇ ಬಾರಿಗೆ,ತಮ್ಮ ಪಂದ್ಯ ಶುಲ್ಕದ ಶೇಕಡ 25ರಷ್ಟು ದಂಡ ವಿಧಿಸಿದರು, ಎರಡನೆಯದಾಗಿ ತಮ್ಮ ಪಂದ್ಯ ಶುಲ್ಕದ ಶೇಕಡ 50ರಷ್ಟು ದಂಡ ವಿಧಿಸಿದ್ದರು. ಅದಾಗಿಯೂ ಸಹ ದಿಗ್ವೇಶ್ ರಾಥಿ ತಮ್ಮ ನೋಟ್ಬುಕ್ ಸೆಲೆಬ್ರೇಶನ್ ಅನ್ನ ಮುಂದುವರಿಸಿದ್ದಾರೆ. ಎಲ್ ಎಸ್ ಟಿ ತಂಡದ ಅಭಿಮಾನಿಗಳಿಗೆ ಇದು ಸಂತಸ ನೀಡಿದರಾದರು, ಇವರು ಫೈನ್ ಕಟ್ಟಲೇಬೇಕು. ಇನ್ನು ಕೆಲ ಕ್ರಿಕೆಟ್ ಅಭಿಮಾನಿಗಳು ಫೈನ್ ಕಟ್ಟುವುದಾದರೆ ಇಂತಹ ಸೆಲೆಬ್ರೇಶನ್ ಗಳನ್ನು ಯಾಕೆ ಮಾಡಬೇಕು ಎಂದು ಸಮ್ಮಿಶ್ರ ಪ್ರತಿಕ್ರಿಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ನೋಟ್ಬುಕ್ ಸೆಲೆಬ್ರೇಷನ್ ಮುಂದುವರೆದಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ದಿಗ್ವೇಶ್ ರಾಥಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.ಇದೀಗ ಮತ್ತೆ ನೋಟ್ಬುಕ್ ಸೆಲೆಬ್ರೇಷನ್ನೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಬೀಳ್ಕೊಡುಗೆ ನೀಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ವಿಕೆಟ್ ಪಡೆದ ದಿಗ್ವೇಶ್ ಎಂದಿನಂತೆ ನೋಟ್ಬುಕ್ ಸಹಿಯೊಂದಿಗೆ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್ಗಳ ಜಯ ಸಾಧಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!