ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.

ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ ಕಾರಣ ವಿದ್ಯುತ್ ಕಂಬವನ್ನೇರಿ ಲೈನ್ಮ್ಯಾನ್ ವಿದ್ಯುತ್ ಕಡಿತಗೊಳಿಸಲು ಮುಂದಾದ ಸಂದರ್ಭದಲ್ಲಿ ಆತನ ಹಿಂದೆಯೇ ದೊಣ್ಣೆ ಹಿಡಿದು ಕಂಬವನ್ನೇರಿದ ಮಹಿಳೆಯೊಬ್ಬರು ಅವಾಸ್ ಹಾಕಿ ಆತನನ್ನು ಕಂಬದಿಂದ ಕೆಳಗಿಳಿಸಿದ್ದಾರೆ. ಮಹಿಳೆಯ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಈ ಅಚ್ಚರಿಯ ಪ್ರಕರಣ ನಡೆದಿದ್ದು, ಹಲವು ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ ಎಂಬ ಕಾರಣಕ್ಕೆ ಲೈನ್ಮ್ಯಾನ್ ಬಂದು ನೇರವಾಗಿ ಕರೆಂಟ್ ಕಂಬದಿಂದಲೇ ವಿದ್ಯುತ್ ಕಡಿತಗೊಳಿಸಲು ಮುಂದಾಗಿದ್ದಾನೆ. ಇದನ್ನು ಕಂಡಂತಹ ಮಹಿಳೆಯೊಬ್ಬರು ತಾನು ಕೂಡಾ ಕೈಯಲ್ಲೊಂದು ದೊಣ್ಣೆ ಹಿಡಿದು ಏಣಿಯ ಮೂಲಕ ಕಂಬವನ್ನೇರಿ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಆತನಿಗೆ ಬೈದಿದ್ದಾರೆ. ಈ ಮಹಿಳೆಯ ಬೈಗುಳಕ್ಕೆ ಹೆದರಿದ ಲೈನ್ಮ್ಯಾನ್ ಕರೆಂಟ್ ಕಟ್ ಮಾಡದೆಯೇ ಕಂಬದಿಂದ ಇಳಿದು ಸೀದಾ ಹೋಗಿದ್ದಾನೆ.
Gharkakalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಕೈಯಲ್ಲೊಂದು ದೊಣ್ಣೆ ಹಿಡಿದು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಧಮ್ಕಿ ಹಾಕುತ್ತಿರುವ ದೃಶ್ಯವನ್ನು ಕಾಣಬಹುದು.
ಡಿಸೆಂಬರ್ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮಹಿಳೆ ನಿಜಕ್ಕೂ ಗಟ್ಟಿಗಿತ್ತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಷ್ಟೆಲ್ಲಾ ಧಮ್ಕಿ ಹಾಕುವ ಬದಲು ಆಕೆಗೆ ಕರೆಂಟ್ ಬಿಲ್ ಪಾವತಿಸಬಹುದಿತ್ತಲ್ವಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!