ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.

ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ ಕಾರಣ ವಿದ್ಯುತ್ ಕಂಬವನ್ನೇರಿ ಲೈನ್ಮ್ಯಾನ್ ವಿದ್ಯುತ್ ಕಡಿತಗೊಳಿಸಲು ಮುಂದಾದ ಸಂದರ್ಭದಲ್ಲಿ ಆತನ ಹಿಂದೆಯೇ ದೊಣ್ಣೆ ಹಿಡಿದು ಕಂಬವನ್ನೇರಿದ ಮಹಿಳೆಯೊಬ್ಬರು ಅವಾಸ್ ಹಾಕಿ ಆತನನ್ನು ಕಂಬದಿಂದ ಕೆಳಗಿಳಿಸಿದ್ದಾರೆ. ಮಹಿಳೆಯ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಈ ಅಚ್ಚರಿಯ ಪ್ರಕರಣ ನಡೆದಿದ್ದು, ಹಲವು ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ ಎಂಬ ಕಾರಣಕ್ಕೆ ಲೈನ್ಮ್ಯಾನ್ ಬಂದು ನೇರವಾಗಿ ಕರೆಂಟ್ ಕಂಬದಿಂದಲೇ ವಿದ್ಯುತ್ ಕಡಿತಗೊಳಿಸಲು ಮುಂದಾಗಿದ್ದಾನೆ. ಇದನ್ನು ಕಂಡಂತಹ ಮಹಿಳೆಯೊಬ್ಬರು ತಾನು ಕೂಡಾ ಕೈಯಲ್ಲೊಂದು ದೊಣ್ಣೆ ಹಿಡಿದು ಏಣಿಯ ಮೂಲಕ ಕಂಬವನ್ನೇರಿ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಆತನಿಗೆ ಬೈದಿದ್ದಾರೆ. ಈ ಮಹಿಳೆಯ ಬೈಗುಳಕ್ಕೆ ಹೆದರಿದ ಲೈನ್ಮ್ಯಾನ್ ಕರೆಂಟ್ ಕಟ್ ಮಾಡದೆಯೇ ಕಂಬದಿಂದ ಇಳಿದು ಸೀದಾ ಹೋಗಿದ್ದಾನೆ.
Gharkakalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಕೈಯಲ್ಲೊಂದು ದೊಣ್ಣೆ ಹಿಡಿದು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಧಮ್ಕಿ ಹಾಕುತ್ತಿರುವ ದೃಶ್ಯವನ್ನು ಕಾಣಬಹುದು.
ಡಿಸೆಂಬರ್ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮಹಿಳೆ ನಿಜಕ್ಕೂ ಗಟ್ಟಿಗಿತ್ತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಷ್ಟೆಲ್ಲಾ ಧಮ್ಕಿ ಹಾಕುವ ಬದಲು ಆಕೆಗೆ ಕರೆಂಟ್ ಬಿಲ್ ಪಾವತಿಸಬಹುದಿತ್ತಲ್ವಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು