ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!

ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವ‌ರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.
ಪ್ರಧಾನಮಂತ್ರಿಯವರು ಈ ಆರೋಪ ವನ್ನು ಗಂಭೀರವಾಗಿಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆರೋಪ ಮಾಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಸ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದು ಮಾತ್ರ ವಲ್ಲ ಇದಕ್ಕಾಗಿ ವೊಡ್ಡಿದ್ದರು. ನಾನು 150 ಕೋಟಿ ರೂ. ಆಮಿಷ ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲಾ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.


‘ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಕ್ಸ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನು ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಸ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದ ಕಾಲದಲ್ಲಿಯೇ ವಕ್ಸ್ ಆಸ್ತಿಗೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮ ಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪಾಡಿ ಅವರ ಬಾಯಿ ಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ, ಎಕ್ಸ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ. ಆಶ್ಚರ್ಯದ ಸಂಗತಿ ಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂ. ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರ ದಿಂದ ಹಿಡಿದು ವಕ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿ ಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!