ವಿಗ್ ಹಾಕಿಕೊಂಡು ಎರಡು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾದ ಶಿವಣ್ಣ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ಕಾರಣಕ್ಕೆ ದೊಡ್ಡ ಬ್ರೇಕ್ ಪಡೆದಿದ್ದರು. ಅಮೆರಿಕದಿಂದ ಸಕ್ಸಸ್ ಫುಲ್ ಆಪರೇಷನ್ ನೊಂದಿಗೆ ಶಿವಣ್ಣ ಕರ್ನಾಟಕಕ್ಕೆ ಮರಳಿದ್ದರು. ಅವರನ್ನು ಅಭಿಮಾನಿಗಳು ಬಹಳ ಸಂತೋಷದಿಂದ ಬರ ಮಾಡಿಕೊಂಡಿದ್ದರು. ಆದರೆ ಅವರ ಮುಂದಿನ ಚಿತ್ರದ ಬಗ್ಗೆ ಯಾವುದೇ ಸಂಪೂರ್ಣ ಮಾಹಿತಿ ದೊರಕಿರಲಿಲ್ಲ. ಇದೀಗ ಶಿವಣ್ಣರವರು ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳುವುದು ಖಚಿತವಾದೊಡನೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಶಿವರಾಜ್ ಕುಮಾರ್ ಅವರು ಯಾವುದೇ ಸಿನಿಮಾ ಶೂಟ್ನಲ್ಲೂ ಭಾಗಿ ಆಗಿರಲಿಲ್ಲ. ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದು ಬಂದರು. ಈಗ ಶಿವರಾಜ್ಕುಮಾರ್ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿದ್ದಾರೆ ಎಂಬುದು ಎಲ್ಲರಿಗೂ ಖುಷಿ ಕೊಟ್ಟ ಸುದ್ದಿ. ಈಗ ಅವರ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಶಿವಣ್ಣ ಸೈಲೆಂಟ್ ಆಗಿ ಚಿತ್ರೀಕರಣ ಆರಂಭಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇನ್ನೊಂದೆಡೆ ಶಿವಣ್ಣ ಚಿತ್ರ ರಂಗಕ್ಕೆ ಮರಳಿರುವುದು ಚಿತ್ರರಂಗದವರೆಗೂ ಸಂತಸದ ಸುದ್ದಿಯಾಗಿದೆ.

ಶಿವರಾಜ್ ಕುಮಾರ್ ವಿಗ್ ಹಾಕಿರುವ ಲುಕ್ ಗಮನ ಸೆಳೆದಿದೆ. ಅವರು ಗಡ್ಡ,ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದರಿಂದ ಫ್ಯಾನ್ಸ್ ಶಿವಣ್ಣ ಅವರನ್ನು ಸಂಭ್ರಮಿಸಿದ್ದಾರೆ.ಶಿವರಾಜ್ ಕುಮಾರ್ ಅವರು ಶೂಟ್ ಮಾಡ್ತಿರೋದು ಯಾವ ಸಿನಿಮಾ? ಯಾರ ಜೊತೆ? ಎಂಬ ಹಲವಾರು ಪ್ರಶ್ನೆಗಳಿಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆದರೆ, ಕೆಲವು ವರದಿಗಳ ಪ್ರಕಾರ ಅವರು ಆರಂಭಿಸಿರೋದು ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ನಿರ್ದೇಶನದ

‘ಆರ್ಸಿ 16’ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ಚರಣ್ ಚಿತ್ರದ ಶೂಟಿಂಗ್ನಲ್ಲಿ ಭಾಗಿ ಆಗೋದಾಗಿ ಈ ಮೊದಲು ಶಿವಣ್ಣ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಇತ್ತೀಚೆಗೆ ಅವರು ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ ಎಂದು ತೆಲುಗು ಚಿತ್ರರಂಗದಿಂದ ವರದಿಗಳು ಕೂಡ ಆಗಿದ್ದವು. ಹೀಗಾಗಿ, ಅವರು ಇದೇ ಸಿನಿಮಾದ ಶೂಟ್ನಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಮರಳಿದ್ದು, ಸಿನಿಮಾ ಶೂಟ್ ಒಂದರಲ್ಲಿ ಭಾಗಿಯಾಗಿದ್ದು, ಸಿನಿ ಪ್ರೇಕ್ಷಕರಿಗೆ ಸಂತಸದ ಸುದ್ದಿಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!