ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ ಗಂಟೆಗಟ್ಟಲೆ ಸಿಲುಕಿ ನಗರ ಪ್ರದೇಶಗಳಲ್ಲಿನ ಜನ ಪ್ರತಿನಿತ್ಯ ಒದ್ದಾಡುತ್ತಿರುತ್ತಾರೆ. ಸಾಮಾನ್ಯವಾಗಿ ಹೆಚ್ಚೆಂದರೆ ಒಂದರಿಂದ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗುತ್ತವೆ. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಜನ ಹೈರಾಣಾಗಿ ಹೋಗಿದ್ದರು. ಅಷ್ಟಕ್ಕೂ ಜಗತ್ತಿನ ಅತಿ ದೊಡ್ಡ ಟ್ರಾಫಿಕ್ ಜಾಮ್ ಆಗಿದ್ದೆಲ್ಲಿ? ಕಾರಣವೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್:
2010 ರ ಆಗಸ್ಟ್ 14 ರಂದು ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ವಿಶ್ವದ ಅತಿ ಉದ್ದನೆಯ ಟ್ರಾಪಿಕ್ ಜಾಮ್ ಉಂಟಾಗಿತ್ತು. 12 ದಿನಗಳ ಕಾಲ ಈ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಜನ ಹೈರಾಣಾಗಿ ಹೋಗಿದ್ದರು. ಬೀಜಿಂಗ್ನ ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ ವೇ (ಚೀನಾ ರಾಷ್ಟ್ರೀಯ ಹೆದ್ದಾರಿ 110) ನಲ್ಲಿ ಈ ಉದ್ದನೆಯ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು 100 ಕಿ.ಮೀ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಂದಿನ ಈ ಟ್ರಾಫಿಕ್ ಜಾಮ್ ಪ್ರಪಂಚದ ಅತ್ಯಂತ ಉದ್ದನೆಯ ಟ್ರಾಫಿಕ್ ಜಾಮ್ ಎಂಬ ಹೆಸರು ಪಡೆದಿದೆ.

ಅಂದು ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ವೇ ನಿರ್ಮಾಣ ಹಂತದಲ್ಲಿತ್ತು. ಈ ರಸ್ತೆ ಕಾಮಗಾರಿಗೆ ಬೇಕಾದ ಕಲ್ಲಿದ್ದಲು ಮತ್ತು ಇತರೆ ಸಾಮಾಗ್ರಿಗಳನ್ನು ಮಂಗೋಲಿಯಾದಿಂದ ಟ್ರಕ್ಗಳಲ್ಲಿ ತರಿಸಲಾಗಿತ್ತು. ಈ ದೈತ್ಯ ಟ್ರಕ್ಗಳ ಕಾರಣದಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಗಂಟೆಗಳು ಅಲ್ಲ, ಈ ಟ್ರಾಫಿಕ್ ಜಾಮ್ ಅನ್ನು ತೆರವು ಗೊಳಿಸಲು ಬರೋಬ್ಬರಿ 12 ದಿನಗಳು ಬೇಕಾದವು. ಸಂಚಾರ ದಟ್ಟಣೆ ಸಂಭವಿಸಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿದ್ದವು. ಇನ್ನೂ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಜನ ಮನೆಗೆ ಹೋಗಲು ಸಾಧ್ಯವಾಗದೆ ಎಕ್ಸ್ಪ್ರೆಸ್ವೇ ಉದ್ದಕ್ಕೂ ತಾತ್ಕಲಿಕ ಟೆಂಟ್ಗಳನ್ನು ನಿರ್ಮಿಸಿದ್ದರು. ಇನ್ನೂ ಕೆಲವರು ತಮ್ಮ ವಾಹನಗಳಲ್ಲಿ ಕುಳಿತು ದಿನ ಕಳೆದರು. ತಿಂಡಿ, ತಂಪು ಪಾನೀಯ, ಊಟ ಸೇರಿದಂತೆ ಆಹಾರ ಪದಾರ್ಥಗಳನ್ನು ಇಲ್ಲಿ ನಾಲ್ಕು ಪಟ್ಟು ಬೆಲೆಗೆ ಮಾರಾಟ ಮಾಡಲಾಗಿತ್ತು. ಇಲ್ಲಿನ ಸರ್ಕಾರ ಈ ಒಂದು ಟ್ರಾಫಿಕ್ ತೆರವುಗೊಳಿಸಲು ಹಗಲಿರುಳು ಶ್ರಮಿಸಿತ್ತು. 2010 ರ ಆಗಸ್ಟ್ 14 ರಂದು ಉಂಟಾದ ಈ ಟ್ರಾಫಿಕ್ ಜಾಮ್ ಆಗಸ್ಟ್ 26, 2010 ರಂದು ಕೊನೆಗೊಂಡಿತು. ಒಟ್ಟಾರೆ ಈ ಟ್ರಾಫಿಕ್ ತೆರವುಗೊಳಿಸಲು 12 ದಿನಗಳು ಬೇಕಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!