ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….

ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಆಗಿದ್ದಾರೆ. ಅವರ ಬ್ಯಾಟಿಂಗ್‌ ಕೂಡ ಅದ್ಭುತವಾಗಿದ್ದು, 3000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ. ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ.

ಇನ್ನು ಬ್ಯಾಟಿಂಗ್‌ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ. ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!