ಸತತವಾಗಿ 27 ಪ್ರಕರಣಗಳನ್ನು ಗೆದ್ದು ಅಚ್ಚರಿ ಮೂಡಿಸಿದ ನಕಲಿ ವಕೀಲ….

ಹೌದು ವೀಕ್ಷಕರೇ ಈ ವಿಷಯಕ್ಕೆ ಸಂಬಂಧಿಸಿದಂತಹ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….ಈಗಿನ ಕಾಲದಲ್ಲಿ ಕೆಲವರು ತಮ್ಮ ಬುದ್ಧಿವಂತಿಕೆಯಿಂದಲೇ ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಅದರಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆದುಕೊಳ್ಳದೇ ಕ್ಲಿನಿಕ್ ಓಪನ್ ಮಾಡಿ ಜನಸಾಮಾನ್ಯರನ್ನು ಯಾಮಾರಿಸಿ ಹಣ ಮಾಡುವವರನ್ನು ನೋಡಿರಬಹುದು. ಆದ್ರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲನಾಗಿದ್ದು ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದಿದ್ದು, ಇದನ್ನು ಕೇಳಿದ ನಿಮಗೆ ಅಚ್ಚರಿ ಎನಿಸಬಹುದು, ಕಾಲ ತುಂಬಾನೇ ಕೆಟ್ಟು ಹೋಗಿದೆ. ಯಾವುದು ನಕಲಿ ಯಾವುದು ಅಸಲಿ ಎಂದು ಗುರುತಿಸುವುದೇ ಕಷ್ಟವಾಗಿದೆ.ನ್ಯಾಯಾಂಗ ವ್ಯವಸ್ಥೆಯಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದೆ. ಕಾನೂನು ವ್ಯವಸ್ಥೆ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲ ಎಂದು ಯಾಮಾರಿಸಿದ್ದು ಮಾತ್ರವಲ್ಲ ಈತನು ತನ್ನ ಬುದ್ಧಿವಂತಿಕೆಯಿಂದ ಎಲ್ಲಾ ಕೇಸ್ ಗಳನ್ನು ಗೆದಿದ್ದಾನೆ. ಈತನ ಹೆಸರು ಬ್ರಿಯನ್ ಮೆಂಡ ಆಗಿದ್ದು, ಈ ಘಟನೆಯೂ ಕೀನ್ಯಾದಲ್ಲಿ ನಡೆದಿದೆ.

ಈಗಿನ ಕಾಲದಲ್ಲಿ ವಕೀಲ ವೃತ್ತಿ ಸೇರಲು ಬೇಕಾದ ಪದವಿ ಪಡೆದುಕೊಂಡಿದ್ದರೂ ಕೇಸ್ ಗಳನ್ನು ಗೆಲ್ಲಲು ಅಷ್ಟೇ ಬುದ್ಧಿವಂತಿಕೆ ಬೇಕಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಬ್ರಿಯನ್ ಮೆಂಡ ಹೆಸರಿನ ನಕಲಿ ವಕೀಲನೊಬ್ಬನು ಒಂದಲ್ಲ, ಎರಡಲ್ಲ ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದು, ವಕೀಲ ವೃತ್ತಿಯಲ್ಲಿರುವವರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.ಹೌದು ಕೀನ್ಯಾದ ಈ ವ್ಯಕ್ತಿಯೂ ನಿಜವಾದ ವಕೀಲನಲ್ಲ, ಜನಸಾಮಾನ್ಯರಿಗಾಗಿ ಸರಿಸುಮಾರು 26 ಪ್ರಕರಣಗಳನ್ನು ಗೆದ್ದುಕೊಂಡಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈತನು ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ತನ್ನ ಮೇಲೆ ಹಾಕಲಾದ ಕೇಸ್ ವಿರುದ್ಧ ವಾದಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಹೌದು ಈ ನಕಲಿ ವಕೀಲನು 27 ನೇ ಪ್ರಕರಣವನ್ನು ವಾದಿಸಿ ಗೆದಿದ್ದು ವಕೀಲ ವೃತ್ತಿಯಲ್ಲಿರುವವವರೂ ಬಾಯಿಯ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ದಾನೆ. ಯಾವುದೇ ಕಾನೂನು ಪದವಿ ಪಡೆಯದಿದ್ದರೂ ಕೂಡ ತನ್ನ ಚಾಣಚಕ್ಯತೆ ಹಾಗೂ ಬುದ್ಧಿವಂತಿಕೆಯಿಂದ ಒಟ್ಟಾರೆ 27 ಪ್ರಕರಣಗಳನ್ನು ವಾದಿಸಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!