ಸಸ್ಯಾಹಾರಿ ಕುಟುಂಬಗಳಿಗೆ ಮಾತ್ರ ಬಾಡಿಗೆ ನೀಡುವುದು ಎಂದ ಮನೆಯ ಮಾಲೀಕ….

ಬಾಡಿಗೆ ಮನೆ ನೀಡಲು ಈ ಮಾಲೀಕರು ಒಂದಲ್ಲ ಒಂದು ನಿಯಮಗಳನ್ನು ಮಾಡುತ್ತಾರೆ. ಬ್ಯಾಚುಲರ್​​​​ಗೆ ಬಾಡಿಗೆ ಮನೆ ನೀಡಲ್ಲ, ಒಳ್ಳೆಯ ಕೆಲಸದಲ್ಲಿ ಇದ್ರೆ ಮಾತ್ರ ಬಾಡಿಗೆ ಮನೆ , ಹೀಗೆ ಅನೇಕ ಕಾರಣಗಳು ಹಾಗೂ ನಿಯಮ, ಇದೀಗ ಮತ್ತೊಂದು ನಿಯಮ ಇದಕ್ಕೆ ಸೇರಿಕೊಂಡಿದೆ, ಮಾಂಸಹಾರಿಗಳಿಗೆ ಬಾಡಿಗೆ ಮನೆ ಇಲ್ಲ, ಸಸ್ಯಹಾರಿಗಳಿಗೆ ಮಾತ್ರ ಬಾಡಿಗೆ ನೀಡಲಾಗುವುದು ಎಂಬ ಸಂದೇಶ ವೈರಲ್​ ಆಗಿದೆ. ಚೆನ್ನೈನಲ್ಲಿ ಮನೆಗಳು ಬಾಡಿಗೆಗೆ ಸಿಗುವುದೇ ಕಷ್ಟ ಅದರಲ್ಲಿ ಈ ನಿಯಮ ಎಂದು ವ್ಯಕ್ತಿಯೊಬ್ಬರು ಎಕ್ಸ್​​ನಲ್ಲಿ ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

ಬೆಂಗಳೂರು, ಚೆನ್ನೈನಂತಹ ಮಹಾನಗರಗಳಲ್ಲಿ ಬಾಡಿಗೆಗೆ ಮನೆ ಸಿಗುವುದೇ ಕಷ್ಟ, ಅದರಲ್ಲೂ ಬ್ಯಾಚುಲರ್​​ಗೆ ಬಾಡಿಗೆ ಮನೆ ನೀಡಲು ಹಿಂದು-ಮುಂದು ನೋಡುತ್ತಾರೆ. ಆದರೆ ಇದೀಗ ಮತ್ತೊಂದು ವಿಚಾರಕ್ಕೆ ಬಾಡಿಗೆ ನೀಡುವವರು ಕಿರಿಕ್ ಮಾಡುತ್ತಿದ್ದಾರೆ ಎಂದು ಒಂದು ಪೋಸ್ಟ್​​​ ವೈರಲ್​​ ಆಗುತ್ತಿದೆ. ಹೌದು ಮಾಂಸಹಾರಿಗಳಿಗೆ ಬಾಡಿಗೆ ಮನೆ ನೀಡುತ್ತಿಲ್ಲ. ಇದರಿಂದ ಅದೆಷ್ಟು ಮಾಂಸಹಾರಿಗಳಿಗೆ ಬಾಡಿಗೆ ಮನೆ ಸಿಗದೇ ಕಷ್ಟಪಡುತ್ತಿದ್ದಾರೆ. 90%ದಷ್ಟು ಮನೆ ಬಾಡಿಗೆ ನೀಡುವವರು ಈ ವಿಚಾರವೊಂದು ಕೇಳಿ ಕೇಳುತ್ತಾರೆ ಎಂದು ಈ ವೈರಲ್​​ ಪೋಸ್ಟ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಕ್ಸ್​​ ಖಾತೆಯಲ್ಲಿ ಚೆನ್ನೈ ನಿವಾಸಿ ಪ್ರಶಾಂತ್ ರಂಗಸ್ವಾಮಿ ಎಂಬುವವರು, ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​​​ ಹೀಗಿದೆ ನೋಡಿ: “ಕ್ಷಮಿಸಿ ಸರ್. ಸಸ್ಯಾಹಾರಿ ಕುಟುಂಬಗಳನ್ನು ಮಾತ್ರ ನೋಡುತ್ತಿದ್ದೇನೆ” ಎಂದು ಮನೆ ಮಾಲೀಕರ ಸಂದೇಶ ಹಾಕಿದ್ದಾರೆ. ಮಾಂಸಹಾರಿಗಳು ಚೆನ್ನೈನಲ್ಲಿ ಬಾಡಿಗೆಗೆ ಫ್ಲಾಟ್‌ಗಳನ್ನು ಹುಡುಕಲು ತುಂಬಾ ಕಷ್ಟ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೊಡ್ಡ, ದೊಡ್ಡ ನಗರಗಳಲ್ಲಿ ಆಹಾರ ಆಧಾರಿತವಾಗಿ ತಾರತಮ್ಯ ಮಾಡುವ ಬಗ್ಗೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಅನೇಕ ಕಡೆಯಲ್ಲಿ ಇಂತಹ ಘಟನೆಗಳು ನಡೆದಿದೆ. ಇದೀಗ ಈ ಒಂದು ವಿಚಾರ ವೈರಲ್​ ಆಗಿದೆ. ಇಂತಹ ತಾರತಮ್ಯವನ್ನು ಮೊದಲು ನಿಲ್ಲಿಸಬೇಕು ಎಂದು ಸೋಶಿಯಲ್​​ ಮೀಡಿಯಾದಲ್ಲಿ ಒತ್ತಾಯ ಮಾಡಿದ್ದಾರೆ. ಕೆಲವು ಬಳಕೆದಾರರು ಈ ಪದ್ಧತಿಯನ್ನು ಖಂಡನೆ ಮಾಡಿದ್ದಾರೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಬಾಡಿಗೆದಾರರನ್ನು ತಿರಸ್ಕರಿಸುವ ಜನರು ಕಡಿಮೆ. ಇನ್ನು ಇದರಲ್ಲಿ ನೀವು ಮುಸ್ಲಿಮರಾಗಿದ್ದರೆ, ಕ್ಷಮಿಸಿ, ನಾವು ಮುಸ್ಲಿಮರಿಗೆ ಬಾಡಿಗೆಗೆ ನೀಡುವುದಿಲ್ಲ ಎಂಬ ಘಟನೆಗಳು ಕೂಡ ನಡೆದಿದೆ ಎಂದು ಕಾಮೆಂಟ್​​ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!