ಸಿಲಿಂಡರ್ ಸ್ಫೋಟಕಕ್ಕೆ ಸಂಬಂಧಿಸಿದಂತೆ ಅಯ್ಯಪ್ಪ ಮಾಲಾಧಾರಿಗಳ ಸಾ*ನ ಸಂಖ್ಯೆ 6ಕ್ಕೆ ಏರಿಕೆ.

ಹುಬ್ಬಳ್ಳಿ :- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮತ್ತು ಮಂಜು ವಾಗ್ಮೋಡೆ (22) ಮೃತ ದುರ್ದೈವಿಗಳು. ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ.86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ.80 ರಷ್ಟು, ರಾಜು ಮೂಗೇರಿಯ ದೇಹ ಶೇ.74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ.86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ.99 ರಷ್ಟು ಮತ್ತು ಮಂಜು ವಾಗ್ಮೋಡೆ ದೇಹ ಶೇ.70 ರಷ್ಟು ಸುಟ್ಟಿತ್ತು. ಇನ್ನೂ ಚಿಂತಾಜನಕ ಸ್ಥಿತಿಯಲ್ಲಿರುವ ಪ್ರಕಾಶ್ ಬಾರಕೇರ್ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಇವರಲ್ಲಿ 6 ಜನರು ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಿಸದೆ ಗುರುವಾರ ರಂದು ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಮೃತಪಟ್ಟಿದ್ದರು. ಶುಕ್ರವಾರ (ಡಿ.27) ರಂದು ರಾಜು ಮೂಗೇರಿ ಮತ್ತು ಲಿಂಗರಾಜ ಬೀರನೂರ ಸಾವಿಗೀಡಾಗಿದ್ದರು. ರವಿವಾರ (ಡಿ.29) ಶಂಕರ್ ಚವ್ಹಾಣ್ ಮತ್ತು ಮಂಜು ವಾಗ್ಮೋಡೆ ಮೃತಪಟ್ಟಿದ್ದಾರೆ. ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೇ, ಕಿಮ್ಸ್ ವೈದ್ಯರು ರಾಜ್ಯ ಮತ್ತು ದೇಶದ ವಿವಿಧ ಭಾಗದ ತಜ್ಞ ವೈದ್ಯರಿಂದ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಮಾಲಾಧಾರಿಗಳಿಗೆ ಶೇ70 ಕ್ಕಿಂತ ಹೆಚ್ಚು ಸುಟ್ಟ ಗಾಯವಾದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.
9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ, ಬಾಲಕನನ್ನು ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!