ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.
ಕಳೆದ ಕೆಲ ವಾರಗಳಿಂದ ಹಲವು ಹಂತಗಳಲ್ಲಿ ಸಾಗುತ್ತಿದ್ದ ಸಿಸಿಎಲ್ನ ಫಿನಾಲೆ ಭಾನುವಾರ (ಮಾರ್ಚ್ 3) ನಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿ ಆದವು. ಈ ವೇಳೆ ಚೆನ್ನೈ ತಂಡ ಸೋತಿದ್ದು, ಪಂಜಾಬ್ ತಂಡ ಗೆಲುವಿನ ನಗೆ ಬೀರಿದೆ. ಈ ಮೂಲಕ ಮೊದಲ ಬಾರಿಗೆ ಕಪ್ಗೆ ಮುತ್ತಿಟ್ಟಿದೆ. ಕರ್ನಾಟಕ ಬುಲ್ಡೋಜರ್ ತಂಡ ಸೆಮಿ ಫೈನಲ್ ಹಂತದಲ್ಲೇ ಸೋಲನ್ನು ಕಂಡಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಚೆನ್ನೈ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟ್ ಮಾಡಿದ ಪಂಜಾಬ್ 1 ವಿಕೆಟ್ ಕಳೆದುಕೊಂಡು 103 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ 14 ರನ್ಗಳ ಮುನ್ನಡೆ ಸಾಧಿಸಿತು. ನಂತರ ಬ್ಯಾಟ್ ಬೀಸಿದ ಚೆನ್ನೈ 85 ರನ್ ಗಳಿಸಲಷ್ಟೇ ಶಕ್ಯವಾಯಿತು.ಪಂಜಾಬ್ ತಂಡ 14 ರನ್ಗಳ ಮುನ್ನಡೆ ಸಾಧಿಸಿದ್ದರಿಂದ 72 ರನ್ಗಳನ್ನು ಬಾರಿಸಿದರೆ ಪಂಜಾಬ್ಗೆ ಗೆಲುವು ಸಿಗುತ್ತಿತ್ತು. ಇದನ್ನು ಕೇವಲ 8 ಓವರ್ಗಳಲ್ಲಿ ಚಚ್ಚಿ ಪಂಜಾಬ್ ಗೆಲುವಿನ ನಗೆ ಬೀರಿತು. ಈ ಮೂಲಕ 8 ವಿಕೆಟ್ಗಳ ಗೆಲುವು ಕಂಡಿತು. ಮೊದಲ ಬಾರಿಗೆ ಕಪ್ ಗೆದ್ದ ಖುಷಿಯನ್ನು ಪಂಜಾಬ್ ತಂಡ ಆಚರಿಸಿಕೊಂಡಿತು. ಚೆನ್ನೈ ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿತು.
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಪರ ಅದ್ಭುತ ಪ್ರದರ್ಶನ ನೀಡಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!