ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.
ಕಳೆದ ಕೆಲ ವಾರಗಳಿಂದ ಹಲವು ಹಂತಗಳಲ್ಲಿ ಸಾಗುತ್ತಿದ್ದ ಸಿಸಿಎಲ್ನ ಫಿನಾಲೆ ಭಾನುವಾರ (ಮಾರ್ಚ್ 3) ನಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿ ಆದವು. ಈ ವೇಳೆ ಚೆನ್ನೈ ತಂಡ ಸೋತಿದ್ದು, ಪಂಜಾಬ್ ತಂಡ ಗೆಲುವಿನ ನಗೆ ಬೀರಿದೆ. ಈ ಮೂಲಕ ಮೊದಲ ಬಾರಿಗೆ ಕಪ್ಗೆ ಮುತ್ತಿಟ್ಟಿದೆ. ಕರ್ನಾಟಕ ಬುಲ್ಡೋಜರ್ ತಂಡ ಸೆಮಿ ಫೈನಲ್ ಹಂತದಲ್ಲೇ ಸೋಲನ್ನು ಕಂಡಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಚೆನ್ನೈ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟ್ ಮಾಡಿದ ಪಂಜಾಬ್ 1 ವಿಕೆಟ್ ಕಳೆದುಕೊಂಡು 103 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ 14 ರನ್ಗಳ ಮುನ್ನಡೆ ಸಾಧಿಸಿತು. ನಂತರ ಬ್ಯಾಟ್ ಬೀಸಿದ ಚೆನ್ನೈ 85 ರನ್ ಗಳಿಸಲಷ್ಟೇ ಶಕ್ಯವಾಯಿತು.ಪಂಜಾಬ್ ತಂಡ 14 ರನ್ಗಳ ಮುನ್ನಡೆ ಸಾಧಿಸಿದ್ದರಿಂದ 72 ರನ್ಗಳನ್ನು ಬಾರಿಸಿದರೆ ಪಂಜಾಬ್ಗೆ ಗೆಲುವು ಸಿಗುತ್ತಿತ್ತು. ಇದನ್ನು ಕೇವಲ 8 ಓವರ್ಗಳಲ್ಲಿ ಚಚ್ಚಿ ಪಂಜಾಬ್ ಗೆಲುವಿನ ನಗೆ ಬೀರಿತು. ಈ ಮೂಲಕ 8 ವಿಕೆಟ್ಗಳ ಗೆಲುವು ಕಂಡಿತು. ಮೊದಲ ಬಾರಿಗೆ ಕಪ್ ಗೆದ್ದ ಖುಷಿಯನ್ನು ಪಂಜಾಬ್ ತಂಡ ಆಚರಿಸಿಕೊಂಡಿತು. ಚೆನ್ನೈ ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿತು.
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಪರ ಅದ್ಭುತ ಪ್ರದರ್ಶನ ನೀಡಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!