ಸೆಮೀಸ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ; ಟೂರ್ನಿಯಿಂದ ಹೊರಬಿದ್ದ ಪಾಕ್ .

ದುಬೈ :- ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ನೆರವಿನಿಂದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ ಟ್ರೋಫಿಯ ಹೈ ವೋಲ್ವೇಜ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದ ಭಾರತ ಸೆಮಿ ಫೈನಲ್ಗೆ ಲಗ್ಗೆ ಹಾಕಿದರೇ, ಸತತ 2ನೇ ಸೋಲು ಅನುಭವಿಸಿದ ಅತಿಥೇಯ ಪಾಕಿಸ್ತಾನ ಟೂರ್ನಿಯಿಂದ ಹೊರ ಬಿದ್ದಿದೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಮಾಡಿದ ಪಾಕಿಸ್ತಾನ 49.4 ಓವರ್ಗಳಲ್ಲಿ 241ರನ್ಗಳಿಗೆ ಆಲೌಟಾಯಿತು. ನಂತರ ಪಾಕಿಸ್ತಾನ ನೀಡಿದ 242ರನ್ ಗಳ ಗುರಿ ಬೆನ್ನತ್ತಿದ ಭಾರತ ಇನ್ನು 7.3 ಓವರ್ಗಳಿರುವಾಗಲೇ 42.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್ ಗಳಿಸುವ ಮೂಲಕ ಜಯದ ನಗೆ ಬೀರಿತು.

ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿತು. ವೇಗವಾಗಿ ಆಡುತ್ತಿದ್ದ ರೋಹಿತ್ ಶರ್ಮಾ ಕೇವಲ 15 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಒಳಗೊಂಡ 20 ರನ್ ಗಳಿಸಿ ಶಹೀನ್ ಆಫ್ರಿದಿ ಅವರಿಗೆ ವಿಕೆಟ್ ಒಪ್ಪಿಸಿದರು. ಈ ವೇಳೆ 2ನೇ ವಿಕೆಟ್ಗೆ ಜೊತೆಯಾದ ಶುಭಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ತಾಳ್ಮೆಯ ಆಟವಾಡಿ 69 ರನ್ಗಳ ಜೊತೆಯಾಟ ವಾಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಅಲ್ಲದೇ ನಿಧಾನವಾಗಿ ಪಂದ್ಯ ವನ್ನು ಪಾಕಿಸ್ತಾನದ ಕೈಯಿಂದ ಕಿತ್ತು ಕೊಂಡರು. ಈ ವೇಳೆ ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ಅವರು 52 ಎಸೆತಗಳಲ್ಲಿ 7 ಬೌಂಡರಿ ಒಳಗೊಂಡ 46 ರನ್ ಗಳಿಸಿ ಅಬ್ರಾರ್ ಅಹ್ಮದ್ ಅವರ ಬೌಲಿಂಗ್ನಲ್ಲಿ ಔಟಾದರು. ಆಗ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ 100 ರನ್ ಆಗಿತ್ತು. ಕೊಹ್ಲಿ- ಆಯ್ಯರ್ ಶತಕದ ಜೊತೆ ಯಾಟ: ಬಳಿಕ ಶ್ರೇಯಸ್ ಅಯ್ಯರ್ ಜೊತೆ ಗೂಡಿದ ಕೊಹ್ಲಿ ಶತಕದ ಜೊತೆಯಾಟ ವಾಡಿದರು. ಇವರಿಬ್ಬರೂ 114 ರನ್ ಜೊತೆ ಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ತಂದರು. ಈ ವೇಳೆ 67 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 56 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್ ಕುಶ್ಚಿಲ್ ಶಾ ಅವರ ಬೌಲಿಂಗ್ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಕವರ್ಸ್ನಲ್ಲಿದ್ದ ಇಮಾಮ್ ಉಲ್ ಅವರಿಗೆ ಕ್ಯಾಚ ನೀಡಿ ಪೆವಿಲಿಯನ್ ಸೇರಿ ಕೊಂಡರು. ನಂತರ ಬ್ಯಾಟಿಂಗ್ಗೆ ಬಂದ ಹಾರ್ದಿಕ್ ಪಾಂಡ್ಯ3 ರನ್ ಗಳಿಸಿ ನಿರ್ಗ ಮಿಸಿದರು. ಆದರೆ ಆಗಲೇ ಭಾರತ ವಿಜಯದ ಹೊಸ್ತಿಲಲ್ಲಿತ್ತು. ಅಕ್ಷರ್ ಪಟೇಲ್ (3) ಗೆ ಹೆಚ್ಚು ಕೆಲಸ ಉಳಿದಿರಲಿಲ್ಲ.

51ನೇ ಶತಕ ಸಿಡಿಸಿದ ಕಿಂಗ್ ಕೊಹ್ಲಿ: ಕಳೆದ ಕೆಲವು ಪಂದ್ಯಗಳಿಂದ ಲಯ ಕಂಡು ಕೊಳ್ಳಲು ಪರದಾಡುತ್ತಿದ್ದ ವಿರಾಟ್ ಕೊಹ್ಲಿ ತಾಳ್ಮೆ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿ ಸುವ ಮೂಲಕ ತಂಡಕ್ಕೆ ಜಯ ತಂದು ಕೊಟ್ಟರು. ಪಾಕ್ ವಿರುದ್ಧದ ಪಂದ್ಯಗಳಲ್ಲಿ ಅಬ್ಬರಿಸುವ ವಿರಾಟ್ ಕೊಹ್ಲಿ ಇಂದು ಕೂಡ ಅಬ್ಬರಿಸಿದರು. ಪಂದ್ಯದಲ್ಲಿ ಎಚ್ಚರಿಕೆಯ ಆಟವಾಡಿದ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 51ನೇ ಶತಕ ಸಿಡಿಸಿ ಸಂಭ್ರಮಿ ಸಿದರು. ಅಲ್ಲದೇ 111 ಎಸೆತಗಳಲ್ಲಿ 7 ಬೌಂಡರಿ ಒಳಗೊಂಡ 100 ರನ್ ಗಳಿಸಿ ಅಜೇಯರಾಗಿ ಉಳಿದು ತಾನೇಕೆ ಚೇಸಿಂಗ್ ಮಾಸ್ಟರ್ ಎಂಬುದನ್ನು ಮತ್ತೊಮ್ಮೆ ಸಾಧಿಸಿ ತೋರಿಸಿದರು. ಪಾಕಿಸ್ತಾನ ಪರ ಶಹೀನ್ ಆಫ್ರಿದಿ 2. ಕುಶ್ಚಿಲ್ ಶಾ ಮತ್ತು ಅಬ್ರಾರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನಕ್ಕೆ ಆರಂಭಿಕ ಆಘಾತ ಎದುರಾಯಿತು. ತಂಡದ ಮೊತ್ತ 47 ರನ್ ಆಗುವಷ್ಟರಲ್ಲೇ ಕೇವಲ 10 ರನ್ಗಳಿಗೆ ಇಮಾಮ್ ಉಲ್ ಹಕ್ ಮತ್ತು 23 ರನ್ ಗಳಿಸಿ ಬಾಬರ್ ಅಜಮ್ ವಿಕೆಟ್ ಒಪ್ಪಿಸಿದ್ದು, ಪಾಕ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಈ ಸಂದರ್ಭ ಸೌದ್ ಶಕೀಲ್ ಮತ್ತು ಕ್ಯಾಪ್ಟನ್ ಮೊಹಮ್ಮದ್ ರಿಜ್ವಾನ್ ಜೊತೆಗೂಡಿ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ 144 ಎಸೆತಗಳಲ್ಲಿ 104 ರನ್ ಗಳಿಸಿ ಭರವಸೆ ಮೂಡಿ ಸಿತು. ಸೌದ್ ಶಕೀಲ್ ಅರ್ಧಶತಕ 62 ರನ್ ಸಿಡಿಸಿದರೇ ರಿಜ್ವಾನ್ 46 ರನ್ ಗಳಿಸಿದರು. ರಿಜ್ವಾನ್ ವಿಕೆಟ್ ಒಪ್ಪಿಸಿ ಹೊರನಡೆಯು ತ್ತಿದ್ದಂತೆ ಮ್ಯಾಚ್ ಪಥವೇ ಬದಲಾ ಯಿತು. ಕ್ರೀಸ್ಗೆ ಬಂದ ಬ್ಯಾಟರ್ಗಳು ಹೆಚ್ಚು ಹೊತ್ತು ನಿಲ್ಲದೇ ವಿಕೆಟ್ಗಳನ್ನು ಒಪ್ಪಿಸಿ ಹೊರ ನಡೆದರು.
ದೇಶಕ್ಕೋಸ್ಕರ ಮುಸಲ್ಮಾನರು ಕೂಡ ಹೋರಾಡಿದ್ದೀವಿ…. ಉದಯಗಿರಿ ಗಲಭೆ ಒಂದು ಆಕಸ್ಮಿಕ ಘಟನೆ…
ಸಲ್ಮಾನ್ ಆಘಾ 19, ತಯ್ಯಬ್ ತಹಿರ್ 4 ರನ್ ಗಳಿಸಿ ಔಟಾದರು. ಖುಷಿಲ್ ಷಾ 38 ರನ್ ಗಳಿಸಿದರು. ಶಾಹೀನ್ ಶಾ ಅಫ್ರಿದಿ ಶೂನ್ಯ ಸುತ್ತಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ನಸೀಮ್ ಷಾ 14 ರನ್ ಗಳಿಸಿದರು. ಭಾರತದ ಪರ ಕುದ್ದೀಪ್ ಯಾದವ್ 3. ಹಾರ್ದಿಕ್ ಪಾಂಡ್ಯ 2, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಉರುಳಿಸಿದರು. ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಭಾರತ ಮಾ.2 ರಂದು ನ್ಯೂಜಿಲೆಂಡ್ ವಿರುದ್ಧ ಲೀಗ್ ಹಂತ ದ ಅಂತಿಮ ಪಂದ್ಯದಲ್ಲಿ ಸೆಣಸಾಡಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!