ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು.

ರಿಷಬ್ ಶೆಟ್ಟಿ ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಪರಭಾಷೆ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ರಿಷಬ್ ಅವರ ಪರಭಾಷೆ ಸಿನಿಮಾ ಇಕ್ಕಟ್ಟಿನಲ್ಲಿ ಸಿಲುಕಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಮೇಲೆ ದೂರು ದಾಖಲಾಗಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ರಿಷಬ್ ಶೆಟ್ಟಿಗೆ ತೆಲುಗು, ಹಿಂದಿ ಚಿತ್ರರಂಗದಿಂದ ಒಂದರ ಹಿಂದೊಂದು ಆಫರ್ಗಳು ಬರುತ್ತಲೇ ಇವೆ. ‘ಹನುಮ್ಯಾನ್’ ಸಿನಿಮಾ ನಿರ್ದೇಶಿಸಿ ಸೂಪರ್ ಹಿಟ್ ನೀಡಿರುವ ಪ್ರಶಾಂತ್ ವರ್ಮಾ ಅವರ ಮುಂದಿನ ತೆಲುಗು ಸಿನಿಮಾ ‘ಜೈ ಹನುಮಾನ್’ನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಹಾಗೂ ಕಿರು ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಅದರ ಬೆನ್ನಲ್ಲೆ ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ಸಹ ದಾಖಲಾಗಿದೆ.
‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಆಂಜನೇಯ ಸ್ವಾಮಿಯ ಪಾತ್ರದಲ್ಲಿ ನಟಿಸಲಿದ್ದಾರೆ. ಈಗ ಬಿಡುಗಡೆ ಆಗಿರುವ ಪೋಸ್ಟರ್ನಲ್ಲಿ ರಿಷಬ್ ಶೆಟ್ಟಿ ಉದ್ದನೆಯ ಗಡ್ಡ ಬಿಟ್ಟುಕೊಂಡು, ಉದ್ದನೆಯ ಕೂದಲು ಬಿಟ್ಟುಕೊಂಡು ಶ್ರೀರಾಮನ ಮೂರ್ತಿಯನ್ನು ಅಪ್ಪಿಕೊಂಡಿರುವ ಚಿತ್ರ ಇದೆ. ಟೀಸರ್ನಲ್ಲೂ ಬಹುತೇಕ ಇದೇ ಇತ್ತು. ಈ ಹಿಂದೆ ಭಾರತೀಯ ಚಿತ್ರರಂಗದಲ್ಲಿ ನಿರ್ಮಿಸಲಾಗಿರುವ ಎಲ್ಲ ಪೌರಾಣಿಕ ಸಿನಿಮಾಗಳಲ್ಲಿ ಹನುಮಂತನ ಪಾತ್ರವನ್ನು ತೋರಿಸಿದ್ದಕ್ಕಿಂತಲೂ ಭಿನ್ನವಾಗಿ ‘ಜೈ ಹನುಮಾನ್’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.
ಹನುಮಂತನ ಮುಖವನ್ನೇ ‘ಜೈ ಹನುಮಾನ್’ ಸಿನಿಮಾದಲ್ಲಿ ಬದಲಾಯಿಸಲಾಗಿದೆ. ಎಲ್ಲರಿಗೂ ತಿಳಿದಿರುವಂತೆ ಹನುಮಂತನ ಮುಖ ವಾನರ ಮುಖವನ್ನು ಹೋಲುತ್ತದೆ. ಆದರೆ ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ಮುಖವನ್ನು ಸಾಮಾನ್ಯ ಮನುಷ್ಯನ ಮುಖದಂತೆಯೇ ತೋರಿಸಲಾಗಿದೆ. ವಾನರನ ರೀತಿ ಹನುಮಂತನನ್ನು ತೋರಿಸಿಲ್ಲ ಇದೇ ಕಾರಣಕ್ಕೆ ಈಗ ವಕೀಲ ತಿರುಮಲ ರಾವ್ ಎಂಬುವರು ನಾಂಪಲ್ಲಿ ನ್ಯಾಯಾಲಯದಲ್ಲಿ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ, ರಿಷಬ್ ಶೆಟ್ಟಿ, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ.
ಹನುಮಂತನ ಮುಖವನ್ನೇ ಬದಲಾಯಿಸುವ ಮೂಲಕ, ಹನುಮನ ಪಾತ್ರವನ್ನು ತಿದ್ದುವ ಕೆಲಸ ಮಾಡಲಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಕಾರ್ಯ ಇದಾಗಿದ್ದು, ಶೀಘ್ರವೇ ಸಿನಿಮಾದ ಪೋಸ್ಟರ್, ಟೀಸರ್ಗಳನ್ನು ಹಿಂಪಡೆಯುವಂತೆ ಆದೇಶಿಸಬೇಕೆಂದು ವಕೀಲ ತಿರುಮಲ ವರ್ಮಾ ಅರ್ಜಿ ದಾಖಲಿಸಿದ್ದಾರೆ. ರಿಷಬ್ ಶೆಟ್ಟಿಯ ‘ಜೈ ಹನುಮಾನ್’ ಸಿನಿಮಾ ರಾಮಾಯಣದ ನಂತರದ ಕತೆಯನ್ನು ಒಳಗೊಂಡಿದೆಯಂತೆ. ರಾಮನಿಗೆ ಹನುಮಂತ ನೀಡಿರುವ ಪ್ರತಿಜ್ಞೆಯ ಕತೆ ಇದಾಗಿದೆಯಂತೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ನಟಿಸಲಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು