ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ

ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಹಿಸುತ್ತವೆ.

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ
ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!