
ಇನ್ನು ಈ ಸರಣಿ ಹೃದಯಾಘಾತ ಪ್ರಕರಣಗಳ ಬಗ್ಗೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಅನಿಲ್ ಪ್ರತಿಕ್ರಿಯಿಸಿದ್ದು, ಯುವ ಜನರಲ್ಲಿ ಹೆಚ್ಚುತ್ತಿರುವ ದುಶ್ಚಟ, ಅಸಮತೊಲನದ ಅಹಾರ ಸೇವನೆ, ಜೀವನ ಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಹೃದಯಾಘಾತ ತಡೆಗೆ ಸಂಸದರ ನೇತೃತ್ವದಲ್ಲಿ ಎಲ್ಲಾ ಅರೋಗ್ಯ ಅದಿಕಾರಿಗಳ ಸಭೆ ನಡೆಸಲಾಗಿದ್ದು, ಹೃದಯಾಘಾತ ತಡೆಗೆ ಅರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಮಾಡಲು ಸಿದ್ದತೆ ನಡೆಸಲಾಗಿದೆ. ಅರೋಗ್ಯ ಕಾರ್ಯಕರ್ತೆ ಯರು ಮೂಲಕ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಾಗೃತಿ ಮಾಡಲಾಗುತ್ತೆ. ಶಾಲೆ ಕಾಲೇಜುಗಳಲ್ಲಿ ಕೂಡ ಹೃದಯ ಅರೋಗ್ಯ ದ ತಪಾಸಣೆ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನ ಮಾಡಲಾಗಿದೆ. ಹೃದಯಾಘಾತಗಳ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಬದಲಾಗಿ ನಿಯಮಿತವಾಗಿ ಅರೋಗ್ಯ ತಪಾಸಣೆ, ಉತ್ತಮ ಅರೋಗ್ಯ ಶೈಲಿ ರೂಪಿಸಿಕೊಂಡು ಅರೋಗ್ಯವಾಗಿರಲು ಮನವಿ ಮಾಡಿದ್ದಾರೆ.





