ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.

ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಉಸ್ಮಾನನನ್ನ ಅಟ್ಟಾಡಿಸಿಕೊಂಡು ಹೊಡೆದು ಕೊಂದಿದ್ದಾರೆ.
ವಿವಾಹಿತ ವ್ಯಕ್ತಿಯೊಬ್ಬ ಅವನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಪ್ರೇಯಸಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ತಿಳಿಸಲಾಗಿದೆ.
ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಕಳೆದೆ ಐದು ವರ್ಷಗಳ ಹಿಂದೆ ಉಸ್ಮಾನ್ ,ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ.ಪ್ರೇಯಸಿಯ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬAಧಿ ಯುವತಿಯೊಂದಿಗೆ ಉಸ್ಮಾನ್ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ,ಜಬೀನ್ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಉಸ್ಮಾನ್ ಹೇಳಿದ್ದಾನೆ. ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊAಡು ಹೋಗಿ ನೂರ್ ನಗರ ಸಮೀಪ ಹಿಡಿದು ಉಸ್ಮಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಅಲ್ಲಿಗೆ ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಸಾವನ್ನಪ್ಪಿದ್ದಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!