
ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ದ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು, ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ

ಶಹಬ್ಬಾಶ್ ಹುಡುಗ್ರಾ! ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯ ಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂ ಚಕ ಅನುಭವ ನೀಡಿತು. ಜೈಹೋ ಟೀಂ ಇಂಡಿಯಾ ಎಂದು ಟೀಟಿಸಿದ್ದಾರೆ.





