ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿಯ ಮಾಲೀಕನ ಕೈ ಸಿಕ್ಕಿಬಿದ್ದಿದ್ದಾನೆ. ತೆಲಂಗಾಣದ ಮೇದಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.
ಈ ಕುರಿತು ಮಾಹಿತಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಹ್ಮದ್ ಮೊಯಿನುದ್ದೀನ್ “ಕಳ್ಳನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಧಿಸಲಾಗಿದೆ. ಆತನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲು ಅವನಿಗೆ ಪ್ರಜ್ಞೆ ಮರಳಲು ಪೊಲೀಸ್ ತಂಡ ಕಾಯುತ್ತಿದೆ ” ಎಂದು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!