ಹೋಟೆಲ್ನ ಬಿಸಿಬಿಸಿ ತಿಂಡಿ ಪಾರ್ಸೆಲ್ಗೆ ಬಳಸುವ ಪ್ಲಾಸ್ಟಿಕ್ ನಿಷೇಧ!

ಬೆಂಗಳೂರು :- (ಕೆಎಂಶಿ) ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಸದಂತೆ ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್.
ಇಡ್ಲಿ, ವಡೆ, ಸಾಂಬಾರ್, ಕಾಫಿ, ಟೀ ಸೇರಿದಂತೆ ಪ್ಲಾಸ್ಟಿಕ್ ಚೀಲ ಗಳಲ್ಲಿ ಬಿಸಿ ಬಿಸಿ ತಿಂಡಿ ಪಾರ್ಸೆಲ್ ನೀಡುವುದು ಮಾರಣಾಂತಿಕ ರೋಗಕ್ಕೆ ಕಾರಣವಾಗಲಿದೆ ಎಂದಿ ದ್ದಾರೆ. ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಸುತ್ತಿರುವುದು ಅನೇಕ ರೋಗಗಳಿಗೆ ಎಡೆಮಾಡಿದೆ, ಅದರಲ್ಲೂ, ರಸ್ತೆ ಬದಿಯ ತಿಂಡಿ ಅಂಗಡಿ ಗಳು ಪ್ಲಾಸ್ಟಿಕ್ ಬಳಕೆ ಮಾಡಿ ಆಹಾರ ತಯಾರಿಕೆ ಹಾಗೂ ಪಾರ್ಸಲ್ಗಳಿಗೆ ಬಳಸುತ್ತಿರುವುದು ಅಪಾಯಕಾರಿಯಾಗಿದೆ.
ಹೋಟೆಲ್ ಇಡ್ಲಿ ಮತ್ತಿತರ ಆಹಾರ ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಅಪಾಯಕಾರಿ ಪ್ಲಾಸ್ಟಿಕ್ ಅಂಶಗಳಿರುವುದು ಪತ್ತೆಯಾಗಿದೆ. ಪ್ರಯೋಗಾಲಯದ ಪರೀಕ್ಷೆ ವೇಳೆ ಇಡ್ಲಿ ಮತ್ತಿತರ ಆಹಾರಗಳಲ್ಲಿ ಕಾರ್ಸಿನೋಜೆನಿಕ್ ವಿಷ ಅಂಶ ಪತ್ತೆಯಾಗಿದೆ. ಈ ಹಾನಿ ಕಾರಕ ಅಂಶದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಆಗಿರುವುದು ಪತ್ತೆಯಾಗಿದೆ. ಮೊದಲು ಇಡ್ಲಿಯನ್ನು ಹತ್ತಿ ಬಟ್ಟೆ ಬಳಸಿ ಬೇಯಿಸುತ್ತಿದ್ದರು, ಆದರೆ, ನಂತರ ಸುಲಭ ವಿಧಾನ ಕಂಡುಕೊಂಡು ಹೋಟೆಲ್ ಉದ್ಯಮ ಪ್ಲಾಸ್ಟಿಕ್ ಬಳಕೆಗೆ ಮೊರೆ ಹೋಗಿದೆ.

ಜಿಟಿ ದೇವೇಗೌಡರ ಮುನಿಸಿಗೆ ಕಾರಣ ಏನು ?
ಇದು ಇಡ್ಲಿ ತಯಾರಿಕೆಗೆ ಮಾತ್ರ ಸೀಮಿತವಾಗಿಲ್ಲ, ಪ್ಲಾಸ್ಟಿಕ್ ಬಳಕೆಯಿಂದ ಆಹಾರ ಅಸುರಕ್ಷಿತ ಎಂಬುದು ಪ್ರಯೋ ಗಾಲದಿಂದ ದೃಢಪಟ್ಟಿದೆ. ಪ್ಲಾಸ್ಟಿಕ್ ಹಾಳೆ ಶಾಖಕ್ಕೆ ಒಡ್ಡಿಕೊಳ್ಳುವುದರಿಂದ ಹಾನಿಕಾರಕ ವಸ್ತು ಹೊರ ಸೂಸುತ್ತದೆ. ಇದು ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ ಎಂದು ತಜ್ಞರು ಹೇಳಿದ್ದಾರೆ. ತಜ್ಞರು ನೀಡಿರುವ ಶಿಫಾ ರಸಿನ ಮೇರೆಗೆ ಆಹಾರ ಪದಾರ್ಥಗಳ ಉತ್ಪಾ ದನಾ ಕೇಂದ್ರ ಹೋಟೆಲ್ ಹಾಗೂ ರೆಸ್ಟೋ ರೆಂಟ್ಗಳಲ್ಲಿ ಪ್ಲಾಸ್ಟಿಕ್ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗುಂಡೂರಾವ್ ತಿಳಿಸಿದರು. ಆದರೆ ದುರ ದೃಷ್ಟಕರ ಸಂಗತಿ ಎಂದರೆ, ಮೈಸೂರಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ದ್ದರೂ ತಯಾರಕರು, ಮಾರಾಟಗಾರರು ಕೇರ್ ಮಾಡುತ್ತಿಲ್ಲ. ಪಾಲಿಕೆ ಅಧಿಕಾರಿ ಗಳು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!