ಅಂಬೇಡ್ಕರ್ ಅವರ ಜೀವನ ಚರಿತ್ರೆ

ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.

ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಕುಟುಂಬದವರು.

ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ರಾಮಜಿ ಸಕ್ಪಾಲ್ ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು, ಅವರು ಮಂಜುಳಾ, ತುಳಸಿ, ಬಲರಾಮ, ಆನಂದರಾವ್ ಮತ್ತು ಭೀಮರಾವ್. ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸಿದ್ದರು. ಇವರು ಮರಾಠಿ, ಹಿಂದಿ ಭಾಷೆಯಲ್ಲಿ ಪ್ರಬುದ್ಧ ಜ್ಞಾನ ಹೊಂದಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!