ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ


ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ


ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?


ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು