ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ


ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ


ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?


ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!