ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ


ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ


ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?


ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!