ಅಧ್ಬುತ ಕ್ಯಾಚ್ ಹಿಡಿದ ಸಾಲ್ಟ್ ಫ್ಯಾನ್ಸ್ ಆದ್ರು ಫ್ಲ್ಯಾಟ್….

ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯ ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು.ಈ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ ಮೊದಲ ಪಂದ್ಯವನ್ನೇ ರೋಮಾಂಚನಗೊಳಿಸಿದರು. ಒಂದಲ್ಲ, ಎರಡಲ್ಲ.. ಈ ಪಂದ್ಯದಲ್ಲಿ ಸಾಲ್ಟ್ ಹಿಡಿದಿದ್ದು ಬರೋಬ್ಬರಿ 3 ಕ್ಯಾಚ್​ಗಳು. ಈ ಮೂರು ಕ್ಯಾಚ್​ಗಳು ಅಷ್ಟು ಸುಲಭದ ತುತ್ತಾಗಿರಲಿಲ್ಲ. ಹಾಗಿದ್ದರೂ ಫಿಲ್ ಸಾಲ್ಟ್ ಈ ಮೂರು ಕ್ಯಾಚ್ಗಳನ್ನು ಹಿಡಿದು ಎಸ್​ಆರ್​ಎಚ್ ರನ್​ ವೇಗಕ್ಕೆ ಕಡಿವಾಣ ಹಾಕಿದರು.

ಅದರಲ್ಲೂ ನಾಯಕ ಇಶಾನ್ ಕಿಶನ್ ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 53 ಎಸೆತಗಳಲ್ಲಿ 97 ರನ್‌ಗಳ ಪಾಲುದಾರಿಕೆಯನ್ನು ನಿರ್ಮಿಸಿದ್ದ ಸ್ಫೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ ಉರುಳಿಸುವಲ್ಲಿ ಸಾಲ್ಟ್ ಅವರ ಚಾಣಾಕ್ಷತನದ ಫಿಲ್ಡಿಂಗ್ ಎಲ್ಲರ ಗಮನ ಸೆಳೆಯಿತು. 22 ಎಸೆತಗಳಲ್ಲಿ 31 ರನ್ ಬಾರಿಸಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಲಾರಂಭಿಸಿದ ಕ್ಲಾಸೆನ್ ದೊಡ್ಡ ಇನ್ನಿಂಗ್ಸ್ ಆಡುವ ಸುಳಿವು ನೀಡಿದ್ದರು. ಇದಕ್ಕೆ ಪೂರಕವಾಗಿ ಕಿಶನ್ ಹಾಗೂ ಕ್ಲಾಸೆನ್ ಜೋಡಿ 13 ಓವರ್‌ಗಳಲ್ಲಿ ತಂಡವನ್ನು 126 ರನ್‌ಗಳ ಗಡಿ ದಾಟಿಸಿದ್ದರು. ಆದ್ದರಿಂದ, ಈ ಜೋಡಿ ಮುರಿಯದಿದ್ದರೆ, ಅದು 250 ರನ್‌ಗಳಾಗಬಹುದೆಂಬ ಭಯವಿತ್ತು. ಆದಾಗ್ಯೂ 14 ನೇ ಓವರ್‌ನಲ್ಲಿ ಈ ಜೋಡಿಯ ಜೊತೆಯಾಟ ಮುರಿದುಬಿತ್ತು. ಅದು ಸಾಲ್ಟ್ ಅವರ ಫಿಲ್ಡಿಂಗ್​ನಿಂದ.

 

14 ನೇ ಓವರ್ ಬೌಲ್ ಮಾಡಲು ಬಂದ ರೊಮಾರಿಯೊ ಶೆಫರ್ಡ್‌ ಅವರ ಮೊದಲ ಎಸೆತದಲ್ಲೇ ಹೆನ್ರಿಕ್ ಕ್ಲಾಸೆನ್ ಭರ್ಜರಿ ಸಿಕ್ಸರ್‌ ಹೊಡೆಯಲು ಪ್ರಯತ್ನಿಸಿದರು. ಆದರೆ ಬೌಂಡರಿ ಲೈನ್ ಬಳಿ ನಿಂತಿದ್ದ ಫಿಲ್ ಸಾಲ್ಟ್ ಅದ್ಭುತ ಕ್ಯಾಚ್ ಪಡೆದರು. ಆದರೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ನಿಯಂತ್ರಣ ಕಳೆದುಕೊಂಡರು. ಹೀಗಾಗಿ ಕ್ಯಾಚ್ ಪಡೆದ ಬಳಿಕ ಸಾಲ್ಟ್ ನೆಲಕ್ಕುರುಳಿದರು. ಇದರಿಂದ ಕ್ಯಾಚ್ ಪೂರ್ಣಗೊಂಡಿದೆಯೇ ಎಂಬುದನ್ನು ತಿಳಿದುಕೊಳ್ಳಲು ಫಿಲ್ಡ್ ಅಂಪೈರ್, ಮೂರನೇ ಅಂಪೈರ್​ನ ಮೊರೆ ಹೋದರು. ಕುಲಂಕುಶವಾಗಿ ಪರಿಶೀಲಿಸಿದ ಮೂರನೇ ಅಂಪೈರ್ ಫೇರ್ ಕ್ಯಾಚ್ ಎಂಬ ತೀರ್ಪು ನೀಡಿದರು. ಆದಾಗ್ಯೂ ಅಂಪೈರ್ ಅವರ ಈ ನಿರ್ಧಾರ ಎಸ್​ಆರ್​ಎಚ್ ಪಾಳಾಯದಲ್ಲಿ ಅಸಮಾಧಾನ ಮೂಡಿಸಿತು. ಏಕೆಂದರೆ ಸಾಲ್ಟ್ ಅವರ ದೇಹ ಬೌಂಡರಿ ಗೆರೆಗೆ ತಾಗಿದೆ ಎಂಬುದು ಅವರ ಅಭಿಪ್ರಾಯವಾಗಿತ್ತು. ಹೀಗಾಗಿ ಕ್ಲಾಸೆನ್ ಕೂಡ ನಾಲ್ಕನೇ ಅಂಪೈರ್ ಬಳಿ ಈ ಬಗ್ಗೆ ಚರ್ಚೆ ನಡೆಸಿದರಾದರೂ ಅದರಿಂದ ಯಾವ ಪ್ರಯೋಜನವೂ ಸಿಗಲಿಲ್ಲ.

ಒಟ್ಟಾರೆಯಾಗಿ ಫಿಲ್ ಸಾಲ್ಟ್ ಅವರ ಅಮೋಘವಾದ ಫೀಲ್ಡಿಂಗ್ ಗೆ ಫಾನ್ಸ್ ಫುಲ್ ಫಿದಾ ಆಗಿದ್ದು , ಎಲ್ಲೆಡೆ ಮೆಚ್ಚುಗೆಯನ್ನ ವ್ಯಕ್ತ ಪಡಿಸುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಹಾಗೂ ವಿಭಿನ್ನ ರೀತಿಯಲ್ಲಿ ಫಿಲ್ ಸಾಲ್ಟ್ ಅವರನ್ನ ಕೊಂಡಾಡಲಾಗುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು