ಅಧ್ಬುತ ಕ್ಯಾಚ್ ಹಿಡಿದ ಸಾಲ್ಟ್ ಫ್ಯಾನ್ಸ್ ಆದ್ರು ಫ್ಲ್ಯಾಟ್….

ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯ ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು.ಈ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ ಮೊದಲ ಪಂದ್ಯವನ್ನೇ ರೋಮಾಂಚನಗೊಳಿಸಿದರು. ಒಂದಲ್ಲ, ಎರಡಲ್ಲ.. ಈ ಪಂದ್ಯದಲ್ಲಿ ಸಾಲ್ಟ್ ಹಿಡಿದಿದ್ದು ಬರೋಬ್ಬರಿ 3 ಕ್ಯಾಚ್​ಗಳು. ಈ ಮೂರು ಕ್ಯಾಚ್​ಗಳು ಅಷ್ಟು ಸುಲಭದ ತುತ್ತಾಗಿರಲಿಲ್ಲ. ಹಾಗಿದ್ದರೂ ಫಿಲ್ ಸಾಲ್ಟ್ ಈ ಮೂರು ಕ್ಯಾಚ್ಗಳನ್ನು ಹಿಡಿದು ಎಸ್​ಆರ್​ಎಚ್ ರನ್​ ವೇಗಕ್ಕೆ ಕಡಿವಾಣ ಹಾಕಿದರು.

ಅದರಲ್ಲೂ ನಾಯಕ ಇಶಾನ್ ಕಿಶನ್ ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 53 ಎಸೆತಗಳಲ್ಲಿ 97 ರನ್‌ಗಳ ಪಾಲುದಾರಿಕೆಯನ್ನು ನಿರ್ಮಿಸಿದ್ದ ಸ್ಫೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ ಉರುಳಿಸುವಲ್ಲಿ ಸಾಲ್ಟ್ ಅವರ ಚಾಣಾಕ್ಷತನದ ಫಿಲ್ಡಿಂಗ್ ಎಲ್ಲರ ಗಮನ ಸೆಳೆಯಿತು. 22 ಎಸೆತಗಳಲ್ಲಿ 31 ರನ್ ಬಾರಿಸಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಲಾರಂಭಿಸಿದ ಕ್ಲಾಸೆನ್ ದೊಡ್ಡ ಇನ್ನಿಂಗ್ಸ್ ಆಡುವ ಸುಳಿವು ನೀಡಿದ್ದರು. ಇದಕ್ಕೆ ಪೂರಕವಾಗಿ ಕಿಶನ್ ಹಾಗೂ ಕ್ಲಾಸೆನ್ ಜೋಡಿ 13 ಓವರ್‌ಗಳಲ್ಲಿ ತಂಡವನ್ನು 126 ರನ್‌ಗಳ ಗಡಿ ದಾಟಿಸಿದ್ದರು. ಆದ್ದರಿಂದ, ಈ ಜೋಡಿ ಮುರಿಯದಿದ್ದರೆ, ಅದು 250 ರನ್‌ಗಳಾಗಬಹುದೆಂಬ ಭಯವಿತ್ತು. ಆದಾಗ್ಯೂ 14 ನೇ ಓವರ್‌ನಲ್ಲಿ ಈ ಜೋಡಿಯ ಜೊತೆಯಾಟ ಮುರಿದುಬಿತ್ತು. ಅದು ಸಾಲ್ಟ್ ಅವರ ಫಿಲ್ಡಿಂಗ್​ನಿಂದ.

 

14 ನೇ ಓವರ್ ಬೌಲ್ ಮಾಡಲು ಬಂದ ರೊಮಾರಿಯೊ ಶೆಫರ್ಡ್‌ ಅವರ ಮೊದಲ ಎಸೆತದಲ್ಲೇ ಹೆನ್ರಿಕ್ ಕ್ಲಾಸೆನ್ ಭರ್ಜರಿ ಸಿಕ್ಸರ್‌ ಹೊಡೆಯಲು ಪ್ರಯತ್ನಿಸಿದರು. ಆದರೆ ಬೌಂಡರಿ ಲೈನ್ ಬಳಿ ನಿಂತಿದ್ದ ಫಿಲ್ ಸಾಲ್ಟ್ ಅದ್ಭುತ ಕ್ಯಾಚ್ ಪಡೆದರು. ಆದರೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ನಿಯಂತ್ರಣ ಕಳೆದುಕೊಂಡರು. ಹೀಗಾಗಿ ಕ್ಯಾಚ್ ಪಡೆದ ಬಳಿಕ ಸಾಲ್ಟ್ ನೆಲಕ್ಕುರುಳಿದರು. ಇದರಿಂದ ಕ್ಯಾಚ್ ಪೂರ್ಣಗೊಂಡಿದೆಯೇ ಎಂಬುದನ್ನು ತಿಳಿದುಕೊಳ್ಳಲು ಫಿಲ್ಡ್ ಅಂಪೈರ್, ಮೂರನೇ ಅಂಪೈರ್​ನ ಮೊರೆ ಹೋದರು. ಕುಲಂಕುಶವಾಗಿ ಪರಿಶೀಲಿಸಿದ ಮೂರನೇ ಅಂಪೈರ್ ಫೇರ್ ಕ್ಯಾಚ್ ಎಂಬ ತೀರ್ಪು ನೀಡಿದರು. ಆದಾಗ್ಯೂ ಅಂಪೈರ್ ಅವರ ಈ ನಿರ್ಧಾರ ಎಸ್​ಆರ್​ಎಚ್ ಪಾಳಾಯದಲ್ಲಿ ಅಸಮಾಧಾನ ಮೂಡಿಸಿತು. ಏಕೆಂದರೆ ಸಾಲ್ಟ್ ಅವರ ದೇಹ ಬೌಂಡರಿ ಗೆರೆಗೆ ತಾಗಿದೆ ಎಂಬುದು ಅವರ ಅಭಿಪ್ರಾಯವಾಗಿತ್ತು. ಹೀಗಾಗಿ ಕ್ಲಾಸೆನ್ ಕೂಡ ನಾಲ್ಕನೇ ಅಂಪೈರ್ ಬಳಿ ಈ ಬಗ್ಗೆ ಚರ್ಚೆ ನಡೆಸಿದರಾದರೂ ಅದರಿಂದ ಯಾವ ಪ್ರಯೋಜನವೂ ಸಿಗಲಿಲ್ಲ.

ಒಟ್ಟಾರೆಯಾಗಿ ಫಿಲ್ ಸಾಲ್ಟ್ ಅವರ ಅಮೋಘವಾದ ಫೀಲ್ಡಿಂಗ್ ಗೆ ಫಾನ್ಸ್ ಫುಲ್ ಫಿದಾ ಆಗಿದ್ದು , ಎಲ್ಲೆಡೆ ಮೆಚ್ಚುಗೆಯನ್ನ ವ್ಯಕ್ತ ಪಡಿಸುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಹಾಗೂ ವಿಭಿನ್ನ ರೀತಿಯಲ್ಲಿ ಫಿಲ್ ಸಾಲ್ಟ್ ಅವರನ್ನ ಕೊಂಡಾಡಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!