‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್ ‘ರಾಮರಸ’ ಚಿತ್ರದಲ್ಲಿ ಮಿಂಚಿಂಗ್.

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.
ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್’ ಹಾಗೂ ‘ಸೆವೆನ್ ಸ್ಟಾರ್ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.
ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’
ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!