‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್ ‘ರಾಮರಸ’ ಚಿತ್ರದಲ್ಲಿ ಮಿಂಚಿಂಗ್.

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.
ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್’ ಹಾಗೂ ‘ಸೆವೆನ್ ಸ್ಟಾರ್ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.
ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’
ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!