ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ದಾಸ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ… ಸದ್ಯ ದರ್ಶನ್ ಅವರು ಕಹಿ ಘಟನೆಗಳನ್ನ ಮರೆತು, ಮತ್ತೆ ಸಿನಿಮಾ ಶೂಟಿಂಗ್ ಕಡೆ ಗಮನ ಹರಿಸಲಿದ್ದಾರೆ. ಹೊರ ಬಂದ ಮೇಲೆ ತಮ್ಮ ಅಭಿಮಾನಿಗಳನ್ನ ಹಾಡಿ ಹೊಗಳಿದ್ದ ದಾಸ, ಇದೀಗ ಹೊಸ ಸಿನಿಮಾಕ್ಕಾಗಿ ಕ್ಯಾಮೆರಾ ಮುಂದೆ ತಮ್ಮ ಅದ್ಭುತ ನಟನೆ ಮುಂದುವರೆಸಲಿದ್ದಾರೆ. ಇದೇ ವಾರ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ದರ್ಶನ್ ಪಾಲ್ಗೊಳ್ಳಲಿದ್ದಾರೆ..

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ ಸಿದ್ಧತೆ ಬಲೂ ಜೋರಾಗಿ ನಡೆಯುತ್ತಿದೆ. ದರ್ಶನ್ ಕೂಡ ಶೂಟಿಂಗ್ನಲ್ಲಿ ಭಾಗಿಯಾಗೋದು ಪಕ್ಕಾ ಆಗಿದೆ. ಈ ವಾರದಲ್ಲೇ ಚಿತ್ರೀಕರಣ ನಡೆಯಲಿದ್ದು , ಚಿತ್ರೀಕರಣದಲ್ಲಿ ಇತರೆ ಕಲಾವಿದರು ತಮ್ಮ ಪಾತ್ರ ನಿಭಾಯಿಸಲಿದ್ದಾರೆ.
ಮಾರ್ಚ್ 8 ರಂದು ಡೆವಿಲ್ ಶೂಟಿಂಗ್ ಬೆಂಗಳೂರಲ್ಲಿ ಆರಂಭವಾಗಲಿದ್ದು , ಬಳಿಕ ಚಿತ್ರತಂಡ ಮೈಸೂರಿಗೆ ಸ್ಥಳಾಂತರಗೊಂಡು ಶೂಟಿಂಗ್ ನಡೆಸಲಿದೆ. ಈಗಾಗಲೇ ಈ ಸಿನಿಮಾದ ಶೂಟಿಂಗ್ ಕೆಲವೊಂದಿಷ್ಟು ಆಗಿದೆ. ಉಳಿದಿದ್ದನ್ನು ಈಗ ಮಾಡಲಾಗುತ್ತಿದೆ. ಅರ್ಧಕ್ಕೆ ನಿಂತಿದ್ದ ಡೆವಿಲ್ ಸಿನಿಮಾದ ಶೂಟಿಂಗ್ ಮುಂದುವರೆಯಲಿದೆ.
ಜೂನ್ 11 ರಂದು ಮೈಸೂರಲ್ಲಿ ಡೆವಿಲ್ ಚಿತ್ರೀಕರಣ ನಡೆಯುತ್ತಿರುವಾಗಲೇ ದರ್ಶನ್ ಅವರನ್ನು ಪೊಲೀಸರು ಪ್ರಕರಣವೊಂದರಲ್ಲಿ ಅರೆಸ್ಟ್ ಮಾಡಿದ್ದರು. ಅಂದು ನಿಂತು ಹೋಗಿದ್ದ ಚಿತ್ರೀಕರಣವನ್ನು 10 ತಿಂಗಳ ಬಳಿಕ ಮತ್ತೆ ಮಾಡಲಾಗುತ್ತಿದೆ.
ಈ ಸುದ್ದಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಹೇಳ ತೀರದ ಸಂತಸವನ್ನು ಉಂಟುಮಾಡಿದೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!