ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ : ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ.

ಹೊಸ ವರ್ಷ ಆಚರಣೆಯ ಸಂಭ್ರಮ ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 31ರಂದು ಕೇವಲ ಅರ್ಧ ದಿನದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷ ಇದೇ ದಿನ ಗಳಿಸಿದ ಆದಾಯಕ್ಕಿಂತಲೂ ಹೆಚ್ಚಿನ ಆದಾಯ ಗಳಿಸಿದೆ.

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್ಬಿಸಿಎಲ್ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.
ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್ಬಿಸಿಎಲ್ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ.

27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.
ಏತನ್ಮಧ್ಯೆ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!