ಆಂಧ್ರದ ತಿರುಪತಿ ತಿಮ್ಮಪ್ಪನಿಗೆ ಭಕ್ತರೊಬ್ಬರು ಬರೋಬ್ಬರಿ 121 ಕೆ.ಜಿ. ಚಿನ್ನವನ್ನು ದೇಣಿಗೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ

121 ಕೆಜಿ ಚಿನ್ನದ ಬೆಲೆ 140 ಕೋಟಿ ರೂಪಾಯಿ
ಉದ್ಯಮ ಸ್ಥಾಪಿಸಿ ಯಶಸ್ವಿಯಾದ ಉದ್ಯಮಿ!
ಹೆಸರು ಹೇಳಲು ಬಯಸದ ತಿರುಪತಿ ವೆಂಕಟೇಶ್ವರನ ಭಕ್ತರೊಬ್ಬರು ಉದ್ಯಮವೊಂದನ್ನು ಸ್ಥಾಪಿಸಿ ಯಶಸ್ವಿಯಾಗಿದ್ದರು. ಇತ್ತೀಚೆಗೆ ಆ ಕಂಪನಿಯಲ್ಲಿನ ಶೇ.60ರಷ್ಟು ಷೇರು ಮಾರಾಟ ಮಾಡಿದ ಪರಿಣಾಮ ಅವರಿಗೆ 6000-7000 ಕೋಟಿ ರು. ಹಣ ಸಿಕ್ಕಿತ್ತು. ತಮಗೆ ಈ ಸಂಪತ್ತು ಸಿಗಲು ಕಾರಣನಾದ ಭಗವಂತನಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ತಿರುಪತಿ ತಿಮ್ಮಪ್ಪನಿಗೆ ಚಿನ್ನವನ್ನು ಕಾಣಿಕೆಯಾಗಿ ನೀಡಲು ಆ ಉದ್ಯಮಿ ನಿರ್ಧರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ತಮ್ಮ ಉದ್ಯಮ ಯಶಸ್ಸು ಕಂಡ ಹಿನ್ನೆಲೆಯಲ್ಲಿ 140 ಕೋಟಿ ರೂಪಾಯಿ ಮೌಲ್ಯದ ಬಂಗಾರವನ್ನು ಕಾಣಿಕೆಯಾಗಿ ನೀಡಿದ್ದಾರೆ. ಓರ್ವ ಅನಾಮಧೇಯ ಭಕ್ತರೊಬ್ಬರು ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಹರಕೆ ಹೊತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಪ್ರಕಟಿಸಿದ್ದಾರೆ. ಈ ಚಿನ್ನದ ಮೌಲ್ಯ ಬರೋಬ್ಬರಿ 140 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಾಹಿತಿ ನೀಡಿದ ಸಿಎಂ ಚಂದ್ರಬಾಬು ನಾಯ್ಡು
ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ (ಪಿ4) ಕಾರ್ಯಕ್ರಮದಲ್ಲಿ ಮಾತನಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, “ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸುವ ಸಂಕಲ್ಪ ಮಾಡಿದ್ದರು. ಇದೀಗ ಅವರು ಅದರಲ್ಲಿ ಪೂರ್ಣ ಯಶಸ್ಸನ್ನು ಕಂಡಿದ್ದಾರೆ. ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ ಇದೀಗ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ,” ಎಂದು ತಿಳಿಸಿದರು.
ಪ್ರತಿನಿತ್ಯ ತಿಮ್ಮಪ್ಪನಿಗೆ 120 ಕೆಜಿ ಆಭರಣ!
ಪ್ರತಿದಿನ ತಿರುಪತಿಯಲ್ಲಿ ಇರುವ ಶ್ರೀ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು ಸುಮಾರು 120 ಕೆಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ. ಈ ವಿಷಯವನ್ನು ತಿಳಿದುಕೊಂಡ ಆ ಅನಾಮಧೇಯ ಭಕ್ತರು, ಅದಕ್ಕಿಂತ ಒಂದು ಕೆಜಿ ಹೆಚ್ಚಿಗೆ, ಅಂದರೆ 121 ಕೆಜಿ ಚಿನ್ನವನ್ನು ದಾನ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ವಿವರಿಸಿದರು.

 

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!