ಆನ್ ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಗ್ರಾಹಕರಿಗೆ ಪರದಾಟ.

ದೇಶಾದ್ಯಂತ ಇಂದು UPI, ಪೇಟಿಎಂ, ಫೋನ್ಪೇ, ಗೂಗಲ್ ಪೇ ಸೇವೆಯಲ್ಲಿ ತೊಂದರೆಯಾಗಿದೆ. ಆನ್ಲೈನ್ ಪೇಮೆಂಟ್ ನಂಬಿಕೊಂಡಿದ್ದವರು ಪರದಾಟ ನಡೆಸುವಂತಾಗಿದ್ದು, ಜೇಬಲ್ಲಿ ಹಣ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಇಂದು ಬೆಳಗ್ಗೆಯಿಂದಲೇ ಆನ್‌ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಆಗಿದೆ. ಸುಮಾರು 1 ಗಂಟೆಗೂ ಹೆಚ್ಚು ಕಾಲ ಈ ತೊಂದರೆ ಕಾಣಿಸಿಕೊಂಡಿದ್ದು, ಜೇಬಲ್ಲಿ ದುಡ್ಡಿಲ್ಲದ ಗ್ರಾಹಕರು ಹಣಕ್ಕಾಗಿ ಪರದಾಡುವಂತಾಗಿದೆ. ದೇಶಾದ್ಯಂತ ಆರ್ಥಿಕ ವ್ಯವಹಾರದ ಮೇಲೆ ಇದು ಪರಿಣಾಮ ಬೀರಿದೆ.


ಸಕಾಲಕ್ಕೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಕೆಲಸ ಮಾಡದ ಹಿನ್ನೆಲೆಯಲ್ಲಿ ಹಲವಾರು ಜನ ತಮಗಾದ ತೊಂದರೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. X ನಲ್ಲಿ UPI ಸರ್ವರ್ ಡೌನ್ ಅನ್ನೋ ಟ್ಯಾಗ್‌ನಲ್ಲಿ ನೆಟ್ಟಿಗರು ಪೋಸ್ಟ್ ಮಾಡುತ್ತಿದ್ದಾರೆ.
UPI ಸರ್ವರ್ ಡೌನ್ ಆದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಈ ಬಗ್ಗೆ ಸ್ಪಷ್ಟನೆ ನೀಡಿದೆ. UPI ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶಃ UPI ವಹಿವಾಟು ಕುಸಿತವಾಗಿದೆ. ನಾವು ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ. ಈ ಅಡಚಣೆಗಾಗಿ ಗ್ರಾಹಕರಲ್ಲಿ ವಿಷಾಧಿಸುತ್ತೇವೆ ಎಂದು NPCI ತಿಳಿಸಿದೆ.


ಈಗಂತೂ ಪ್ರತಿಯೊಬ್ಬರು UPI ಮೂಲಕ ಹಣ ಪಾವತಿ ಮಾಡುವ ಅಭ್ಯಾಸ ರೂಡಿಸಿಕೊಂಡಿದ್ದಾರೆ. ಇದಕ್ಕಾಗಿ ಆನ್‌ಲೈನ್ ಪೇಮಂಟ್ ವೇದಿಕೆಗಳಾದ ಪೇಟಿಎಂ, ಫೋನ್ಪೇ, ಗೂಗಲ್ ಪೇಯನ್ನ ಬಳಸಲಾಗುತ್ತಿದೆ. ಇವುಗಳ ಅವಲಂಬಿತರಾಗಿರುವುದರಿಂದ ಸಾಕಷ್ಟು ಮಂದಿ ತಮ್ಮ ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನೇ ಬಿಟ್ಟಿದ್ದಾರೆ. ಇದೀಗ ದಿಢೀರ್ ಸಮಸ್ಯೆ ಎದುರಾಗಿರುವುದರಿಂದ ಜೇಬಲ್ಲಿ ದುಡ್ಡು ಇಲ್ಲದೇ ಪರದಾಡುವಂತಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!