ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ.
ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಜಸ್ಟ್ 23 ನಿಮಿಷದಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಏಕಕಾಲಕ್ಕೆ ಧ್ವಂಸ ಮಾಡಿರೋ ಕಾರ್ಯಾಚರಣೆ ಮೈ ಜುಮ್ಮೆನ್ನುವಂತೆ ಮಾಡಿದೆ. ಭಾರತೀಯ ಸೇನೆಯ ಈ ಯಶಸ್ವಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಅನ್ನೋ ಹೆಸರಿಟ್ಟಿರೋದೇ ವಿಶೇಷವಾಗಿದೆ.ಆಪರೇಷನ್ ಸಿಂಧೂರ ಪಹಲ್ಗಾಮ್‌ನಲ್ಲಿ ಸಿಂಧೂರ ಅಳಿಸಿದ ಉಗ್ರರ ಸಂಹಾರದ ಪ್ರತೀಕವಾಗಿದೆ. ಕಣ್ಣ ಮುಂದೆಯೇ ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ನೀಡುವ ಭಾರತದ ಹೋರಾಟವಾಗಿದೆ. ಭಯೋತ್ಪಾದಕರ ಬುಡಕ್ಕೆ ಬೆಂಕಿ ಇಟ್ಟಿರುವ ಅಪರೇಷನ್ ಸಿಂಧೂರ ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯೋದರಲ್ಲೂ ಅನುಮಾನವೇ ಇಲ್ಲ.

ಆಪರೇಷನ್ ಸಿಂಧೂರದ ಬಗ್ಗೆ ಎಲ್ಲೆಲ್ಲೂ ಚರ್ಚೆಯಾಗುತ್ತಿರುವಾಗಲೇ ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ.ಎಂ.ಆರ್ ರಮೇಶ್‌ ಅವರು ಈ ಬಗ್ಗೆ ಮಾತನಾಡಿ ಇದು ಒಂದೊಳ್ಳೆ ರೋಚಕ ಕಥೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.ಸೈನೈಡ್, ಅಟ್ಟಹಾಸ ಅನ್ನೋ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎ.ಎಂ.ಆರ್ ರಮೇಶ್ ಅವರು ಮಾತನಾಡಿ ಇಂದು ನಿಜಕ್ಕೂ ರೋಮಾಂಚನವಾಗುತ್ತಿದೆ. ಭಯೋತ್ಪಾದಕರು ಸತ್ತಿದ್ರೆ, ನಿಜಕ್ಕೂ ಖುಷಿಯ ವಿಚಾರ. ಇಂತಹದೊಂದು ಪ್ರತೀಕಾರದ ದಾಳಿಯನ್ನ ನಾವು ಎದುರು ನೋಡುತ್ತಾ ಇದ್ವಿ. ಉಗ್ರರಿಗೆ ಭಾರತೀಯ ಸೇನೆ ತಕ್ಕದಾದ ಉತ್ತರ ಕೊಟ್ಟಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಹೆಸರಲ್ಲೇ ಒಂದು ಎಮೋಷನ್ ಇದೆ. ಸಿನಿಮಾ ಮಾಡೋಕೆ ನಿಜಕ್ಕೂ ಒಂದೊಳ್ಳೆ ಘಟನೆ ಇದು‌. ಈ ಸ್ಕ್ರೈಕ್ ಹಿಂದಿನ ಕಥೆ ಹಿಡಿದ್ರೆ ಒಂದೊಳ್ಳೆ ರೋಚಕ ಕಥೆ ಆಗುತ್ತೆ. ಯಾರಾದ್ರೂ ಈ ಸಿನಿಮಾ ಮಾಡೋರಿಗೆ ಒಳ್ಳೆಯದಾಗಲಿ. ಈಗಾಗಲೇ ಬಹುಶಃ ಯಾರಾದರೂ ಟೈಟಲ್ ರಿಜಿಸ್ಟರ್ ಮಾಡಿಸಿದ್ರೂ ಮಾಡಿಸಿರುತ್ತಾರೆ ಎಂದು ಎ.ಎಂ.ಆರ್ ರಮೇಶ್ ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!