ಆರೋಗ್ಯಕ್ಕೆ ಹಾನಿಕಾರಕ ಅಂಶ ಹಸಿರು ಬಟಾಣಿಯಲ್ಲೂ ಪತ್ತೆ: ಆರೋಗ್ಯ ಇಲಾಖೆ.

ಬೆಂಗಳೂರು: ಬೆಂಗಳೂರಿನ ಆಹಾರಪ್ರಿಯರಿಗೆ ಆಹಾರ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.

ಬಟಾಣಿ ಆರೋಗ್ಯಕ್ಕೆ ಮಾರಕ ಹೇಗೆ?
ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಬಟಾಣಿಯಲ್ಲಿ ಕೃತಕ ಕಲರ್ ಬಳಕೆ ವಿಚಾರವಾಗಿ ಆಹಾರ ತಜ್ಞೆ ಡಾ. ಕೀರ್ತಿ ಹಿರಿಸಾವೆ ಮಾತನಾಡಿ, ಬಟಾಣಿಯಲ್ಲಿ ಕ್ಲೋರೋಫಿಲ್ ಅಂಶ ಇರುತ್ತೆ. ಹಸಿ ಬಟಾಣಿಗೆ ಮ್ಯಾಲಚೈಟ್ ಗ್ರೀನ್ ಬಳಕೆ ಮಾಡಲಾಗುತ್ತದೆ. ಇದು ಮನುಷ್ಯರ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಮ್ಯಾಲಚೈಟ್ ಗ್ರೀನ್ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ. ಇದು ಯೂರಿನ್ ಪ್ರೊಡಕ್ಷನ್ ಹಾಗೂ ಯೂರಿನ್ ಪ್ಯೂರಿಫೈ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಬಣ್ಣ ಹಾಕಿದ ಬಟಾಣಿ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.
ಕಾಂಗ್ರೆಸ್​ ಸರ್ಕಾರ ಬಂದ್ಮೇಲೆ Transfer ದಂ* ಜಾಸ್ತಿಯಾಗಿದೆ <

ಹೋಟೇಲ್ಗಳ ಮೇಲೆ ಆಹಾರ ಇಲಾಖೆ ದಾಳಿ
ಆಹಾರ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ವಿವಿಧ ನಗರದಲ್ಲಿನ ಹೋಟೆಲ್ಗಳಿಗೆ ಭೇಟಿ ನೀಡಿದ್ದಾರೆ. ವಲಯವಾರು ಹೋಟೆಲ್ಗಳ ಮೇಲೆ ರೇಡ್ ಮಾಡಿರುವ ಆಹಾರ ಇಲಾಖೆ ಅಧಿಕಾರಿಗಳು ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಆಗುತ್ತಿದಿಯಾ ಎಂದು ಪರಿಶೀಲನೆ ನಡೆಸಿದರು. ಪ್ಲಾಸ್ಟಿಕ್ ಬಳಸುತ್ತಿರುವ ಹೋಟೆಲ್ಗಳಿಗೆ ನೋಟಿಸ್ ಜೊತೆಗೆ ದಂಡ ಹಾಕುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!