ಆರ್ಸಿಬಿ ವಿರುದ್ಧ ಪಂದ್ಯವನ್ನಾಡಲು ಸಿರಾಜ್ ಭಾವುಕ….

ನಿನ್ನೆ ಅಂದರೆ ಏಪ್ರಿಲ್ 2ರಂದು ನಡೆದ ರ್ಸಿಬಿ ಹಾಗೂ ಜಿಟಿ ನಡುವಿನ ಪಂದ್ಯಾವಳಿಯಲ್ಲಿ ಮಹಮ್ಮದ್ ಸಿರಾಜ್ ರವರು ಆರ್ಸಿಬಿ ತಂಡವನ್ನು ಬಿಟ್ಟು ಗುಜರಾತ್ ಟೈಟನ್ಸ್ ಪರ ಆಟವಾಡುತ್ತಿದ್ದು. ಚಿನ್ನಸ್ವಾಮಿ ಯಲ್ಲಿ ಅತ್ಯದ್ಭುತವಾದ ಪ್ರದರ್ಶನವನ್ನು ನೀಡಿದರು. ತಮ್ಮ ಕೋಟಾದ ನಾಲ್ಕು ಓವರ್ಗಳಲ್ಲಿ 4.80 ಎಕನಾಮಿಕ್ ರೇಟ್ನಲ್ಲಿ ಕೇವಲ 19 ರನ್ ನೀಡಿ, ಮೂರು ವಿಕೆಟ್ ಪಡೆದರು. ಪಂದ್ಯ ಮುಗಿದ ನಂತರ ವಿಶೇಷ ಗೌರವಕ್ಕೆ ಪಾತ್ರರಾದರು.

ಇದೇ ವೇಳೆ ಮಾತನಾಡಿರುವ ಸಿರಾಜ್, ಕಳೆದ ಏಳು ವರ್ಷಗಳಿಂದ ನಾನು ಆರ್ಸಿಬಿ ಪರ ಆಡುತ್ತಿದ್ದೆ. ಹಾಗಾಗಿ ಸಹಜವಾಗಿಯೇ ಭಾವುಕನಾದೆ. ಯಾವಾಗ ಗಿಲ್ ಅವರು ನನ್ನ ಕೈಗೆ ಬಾಲ್ ನೀಡಿದರೋ ಆಗ ಕಾಮನ್ ಆದೆ. ನಾನು ನಿರಂತರವಾಗಿ ಪಂದ್ಯಗಳನ್ನು ಆಡಿದೆ. ಆದ್ದರಿಂದ ಯಾವ ತಪ್ಪುಗಳನ್ನು ಮಾಡ್ತಿದ್ದೇನೆಂದು ಅರ್ಥವಾಗಲಿಲ್ಲ. ಬಿಡುವು ಸಿಕ್ಕಾಗ ಬೌಲಿಂಗ್ ಮತ್ತು ಫಿಟ್ನೆಸ್ನತ್ತ ಗಮನಹರಿಸಿದೆ.

ಗುಜರಾತ್ ಟೈಟಾನ್ಸ್ಗೆ ಸೇರಿದಾಗ ಆಶಿಶ್ ನೆಹ್ರಾ ಭಾಯ್ ಜೊತೆ ಮಾತನಾಡಿದೆ. ನಿಮ್ಮ ಆಟವನ್ನು ಆನಂದಿಸಿ, ಮಾಡಬೇಕಾದ ಕೆಲಸ ಮಾಡಿ ಎಂದರು. ನಾನು ತಂಡದಲ್ಲಿರುವ ಇತರ ಬೌಲರ್ಗಳಾದ ರಬಾಡ, ಇಶಾಂತ್ ಮತ್ತು ಇತರೆ ಬೌಲರ್ಗಳೊಂದಿಗೆ ಮಾತನಾಡುತ್ತೇನೆ. ಅವರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತೇನೆ. ಅದು ನನಗೆ ನಿಜವಾಗಿಯೂ ಸಹಾಯಕ್ಕೆ ಬರುತ್ತಿದೆ. ಒಬ್ಬ ಬೌಲರ್ ಆಗಿ ಯಾವಾಗಲೂ ಆತ್ಮವಿಶ್ವಾಸ ಹೊಂದಲು ಬಯಸುತ್ತೇನೆ. ಇದು ಪ್ರಮುಖ ವಿಷಯ ಎಂದಿದ್ದಾರೆ. ಸಿರಾಜ್ ರವರು ಉತ್ತಮ ಬೌಲಿಂಗ್ ಪ್ರದರ್ಶನವನ್ನು ಮಾಡಿದ್ದು ಜಿಟಿ ಅಭಿಮಾನಿಗಳಿಗೆ ಸಂತಸವನ್ನು ತಂದಿದ್ದು, ಆರ್ಸಿಬಿ ಅಭಿಮಾನಿಗಳು ಅವರನ್ನು ಬೇರೆ ತಂಡದಲ್ಲಿ ನೋಡಿ ಮನನೊಂದು ಕೊಂಡಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!