ಆರ್.ಸಿ.ಬಿ ಯ ಹೀರೋ ಆದ ಯಶ್ ದಯಾಳ್ ನ ಯಶೋಗಾಥೆ….

2023ರಲ್ಲಿ ಜಿ.ಟಿ ತಂಡದ ಆಟಗಾರನಾಗಿದ್ದಂತಹ ಯಶ್ ದಯಾಳ್, ಒಂದೇ ಓವರ್ನಲ್ಲಿ ಐದು ಸಿಕ್ಸರ್ಸ್ಗಳನ್ನ ರಿಂಕು ಸಿಂಗ್ ಅವರ ಬ್ಯಾಟಿಂಗ್ ನಲ್ಲಿ ಹೊಡೆಸಿಕೊಳ್ಳುತ್ತಾರೆ. ಅದಾದ ನಂತರ ಜಿ.ಟಿ ಫ್ರಾನ್ಚೈಸಿಯು ಅವರನ್ನು ತಂಡದಿಂದ ಕೈ ಬಿಡುತ್ತಾರೆ. ನಂತರ 2024ರಲ್ಲಿ ಆರ್.ಸಿ.ಬಿ ಫ್ರಾಂಚೈಸಿಯು ಅವರನ್ನ ಬಿಡ್ ಮಾಡಿ ಖರೀದಿಸುತ್ತಾರೆ. ನಂತರ ತಂಡದಲ್ಲಿ ಅತ್ಯುತ್ತಮವಾದ ಪ್ರದರ್ಶನವನ್ನು ನೀಡುತ್ತಾರೆ. ಪ್ಲೇ ಆಫ್ ಆದಿ ತಲುಪುವಲ್ಲಿ ಸಿಎಸ್‌ಕೆ ತಂಡದ ವಿರುದ್ಧ ಕೊನೆಯ ಓವರ್ ನಲ್ಲಿ ಅತ್ಯದ್ಭುತ ಬೌಲಿಂಗ್ ಪ್ರದರ್ಶನವನ್ನು ನೀಡುತ್ತಾರೆ. ಈ ಬಾರಿಯೂ ಸಹ ಅದೇ ಕೆಲಸವನ್ನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಯಶ್ ದಯಾಳ್. ಐಪಿಎಲ್ ಸೀಸನ್ 18, 52ನೇ ಪಂದ್ಯಾವಳಿಯಲ್ಲಿ, ಸಿ ಎಸ್ ಕೆ ತಂಡದ ವಿರುದ್ಧದ ಕೊನೆಯ ಓವರ್ ನಲ್ಲಿ ತಮ್ಮ ಕೋಟಾದ ನಾಲ್ಕನೇ ಓವರ್ ನಲ್ಲಿ ಧೋನಿ ಅವರನ್ನು ಎಲ್.ಬಿ.ಡಬ್ಲ್ಯೂ ಮಾಡಿ ಔಟ್ ಮಾಡುವ ಮುಖಾಂತರ ಪಂದ್ಯದ ದಿಕ್ಕನ್ನೇ ಬದಲಿಸುತ್ತಾರೆ. ಅಲ್ಲದೆ ಲೋಪುಲ್ಟಾಸ್ ಹಾಕುವ ಯತ್ನದಲ್ಲಿ ನೋಬಾಲ್ ಸಹ ಮಾಡ್ತಾರೆ ಆರು ರನ್ಗಳನ್ನ ಸಹ ನೀಡ್ತಾರೆ. ಅದಾದ್ಮೇಲೆ ನಡೆದಿದ್ದು ಇತಿಹಾಸ. ಇದೆಲ್ಲವನ್ನ ಗಮನದಲ್ಲಿಟ್ಟುಕೊಂಡು ಆರ್‌ಸಿಬಿಯ ಹೀರೋ ಯಶ್ ದಯಾಳ್ ಎಂದು ಕೊಂಡಾಡಿದ್ದಾರೆ ಅಭಿಮಾನಿಗಳು.ತಮ್ಮ ತಪ್ಪುಗಳಿಂದ ಪಾಠ ಕಲಿತ ಯಶ್ ದಯಾಳ್ ಐಪಿಎಲ್ 2024 ರಲ್ಲಿ ಆರ್‌ಸಿಬಿ ಪರ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದರು. ಯಶ್ ದಯಾಳ್ ಅವರ ಈ ಅದ್ಭುತ ಪ್ರದರ್ಶನವನ್ನು ನೋಡಿದ ಆರ್‌ಸಿಬಿ ಐಪಿಎಲ್ 2025 ಕ್ಕೆ ಅವರನ್ನು ಉಳಿಸಿಕೊಂಡಿತು. ಯಶ್ ಆರ್‌ಸಿಬಿಯ ನಂಬಿಕೆಗೆ ತಕ್ಕಂತೆ ಬದುಕಿದರು ಮತ್ತು ಈಗ ಅವರ ತಂಡದ ಅತಿದೊಡ್ಡ ಪ್ರಮುಖ ಬೌಲರ್ ಆಗಿದ್ದಾರೆ.

ಐಪಿಎಲ್ 2023 ರಲ್ಲಿ ಯಶ್ ದಯಾಳ್ ಗುಜರಾತ್ ಟೈಟಾನ್ಸ್ ಪರ ಆಡುವಾಗ ಅವರ ಒಂದೇ ಓವರ್ನಲ್ಲಿ ರಿಂಕು ಸಿಂಗ್ 5 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆಗ ಯಶ್ ದಯಾಳ್ ತಮ್ಮ ವೃತ್ತಿಜೀವನ ಇಲ್ಲಿಗೆ ಮುಗಿಯಿತು ಎಂದೇ ಭಾವಿಸಲಾಗಿತ್ತು. ಕೆಕೆಆರ್ ವಿರುದ್ಧದ ಆ ಪಂದ್ಯದಲ್ಲಿ ಯಶ್ ದಯಾಳ್ ಅತಿದೊಡ್ಡ ವಿಲನ್ ಆದರು. ಆ ಋತುವಿನ ನಂತರ ಗುಜರಾತ್ ಯಶ್ ದಯಾಳ್ ಅವರನ್ನು ಬಿಡುಗಡೆ ಮಾಡಿತು, ಆದರೆ ಆರ್‌ಸಿಬಿ ಹರಾಜಿನಲ್ಲಿ ಯಶ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿತು. ತಮ್ಮ ತಪ್ಪುಗಳಿಂದ ಪಾಠ ಕಲಿತ ಯಶ್ ದಯಾಳ್ ಐಪಿಎಲ್ 2024 ರಲ್ಲಿ ಆರ್‌ಸಿಬಿ ಪರ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದರು.

ಯಶ್ ದಯಾಳ್ ಅವರ ಈ ಅದ್ಭುತ ಪ್ರದರ್ಶನವನ್ನು ನೋಡಿದ ಆರ್‌ಸಿಬಿ ಐಪಿಎಲ್ 2025 ಕ್ಕೆ ಅವರನ್ನು ಉಳಿಸಿಕೊಂಡಿತು. ಯಶ್ ಆರ್‌ಸಿಬಿಯ ನಂಬಿಕೆಗೆ ತಕ್ಕಂತೆ ಬದುಕಿದರು ಮತ್ತು ಈಗ ಅವರ ತಂಡದ ಅತಿದೊಡ್ಡ ಪ್ರಮುಖ ಬೌಲರ್ ಆಗಿದ್ದಾರೆ. ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ವಿಶ್ವದ ಶ್ರೇಷ್ಠ ಫಿನಿಷರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಮಹೇಂದ್ರ ಸಿಂಗ್ ಧೋನಿ ಕೂಡ ಅವರ ಬಿಗಿಯಾದ ಬೌಲಿಂಗ್ ಮುಂದೆ ಅಸಹಾಯಕರಾಗಿ ಕಂಡರು. ಐಪಿಎಲ್ 2025 ರ ಹಿಂದಿನ ಪಂದ್ಯದಲ್ಲಿ ಕೂಡ ಇದೇರೀತಿ ಕಂಡುಬಂದಿದೆ.

ಯಶ್ ವಿರುದ್ಧ ನಡೆಯಲ್ಲ ಧೋನಿ ಆಟ;
ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ, ಯಶ್ ದಯಾಳ್ ಕೊನೆಯ ಓವರ್‌ನಲ್ಲಿ 15 ರನ್‌ಗಳನ್ನು ರಕ್ಷಿಸಿಕೊಳ್ಳಬೇಕಾಯಿತು. ಕೊನೆಯ ಓವರ್ನ ಮೊದಲ ಮೂರು ಎಸೆತಗಳಲ್ಲಿ ಯಶ್ ದಯಾಳ್ ಸಿಎಸ್‌ಕೆ ಸೋಲನ್ನು ದೃಢಪಡಿಸಿದರು. ಧೋನಿ ಮತ್ತು ರವೀಂದ್ರ ಜಡೇಜಾ ಕ್ರೀಸ್‌ನಲ್ಲಿ ನಿಂತಿದ್ದರು. ಮೊದಲ ಚೆಂಡು ಫುಲ್-ಟಾಸ್ ಆಗಿತ್ತು ಆದರೆ ಧೋನಿ ಅದನ್ನು ಸರಿಯಾಗಿ ಟಚ್ ಮಾಡಲು ವಿಫಲರಾದರು ಮತ್ತು ಸಿಂಗಲ್ ತೆಗೆದುಕೊಂಡು ಜಡೇಜಾಗೆ ಸ್ಟ್ರೈಕ್ ನೀಡಿದರು. ಯಶ್ ಅದ್ಭುತ ಯಾರ್ಕರ್ ಮೂಲಕ ಜಡೇಜಾ ಅವರನ್ನೂ ಕಟ್ಟಿಹಾಕಿದರು. ಮೂರನೇ ಎಸೆತದಲ್ಲಿ ಧೋನಿ ಮತ್ತೊಮ್ಮೆ ಸ್ಟ್ರೈಕ್‌ಗೆ ಬಂದರು ಮತ್ತು ಈ ಬಾರಿ ಯಶ್ ಅವರನ್ನು ಎಲ್ಬಿಡಬ್ಲ್ಯೂ ಔಟ್ ಮಾಡಿದರು.

ಧೋನಿ ಔಟಾದ ತಕ್ಷಣ, ಪಂದ್ಯವು ಆರ್‌ಸಿಬಿ ಪರವಾಗಿ ಬಂದಿತು. ನಾಲ್ಕನೇ ಎಸೆತದಲ್ಲಿ ನೋ ಬಾಲ್ ಹಾಗೂ ಸಿಕ್ಸ್ ಹೋದರು ಯಶ್ ಮತ್ತೆ ಕಮ್ಬ್ಯಾಕ್ ಮಾಡಿದರು. ಯಶ್ ತಮ್ಮ ಹಿಡಿತವನ್ನು ಕಾಯ್ದುಕೊಂಡು ಕೊನೆಯ ಮೂರು ಎಸೆತಗಳಲ್ಲಿ ಕೇವಲ ಮೂರು ರನ್‌ಗಳನ್ನು ಬಿಟ್ಟುಕೊಟ್ಟರು, ಇದರಿಂದಾಗಿ ಆರ್ಸಿಬಿ ಪಂದ್ಯವನ್ನು ಗೆದ್ದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ 5 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಸಿಎಸ್‌ಕೆ 5 ವಿಕೆಟ್‌ಗೆ 211 ರನ್ ಗಳಿಸಲಷ್ಟೇ ಶಕ್ತವಾಯಿತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!