ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್?ಈಗ ಅಧಿಕೃತವಾಗುತ್ತಿದೆ.

ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

ಆ್ಯಂಕರ್ ಅನುಶ್ರೀ ಅವರು ಯಾವಾಗ ಮದುವೆ ಆಗುತ್ತಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಪ್ರತಿ ವೇದಿಕೆ ಮೇಲೆ ಅವರ ಎದುರು ಪ್ರಶ್ನೆಗಳನ್ನು ಇಡಲಾಗುತ್ತಿತ್ತು. ಈ ವರ್ಷ ವಿವಾಹ ಆಗಿಯೇ ಆಗುತ್ತೇನೆ ಎಂದು ಅವರು ಭರವಸೆ ನೀಡಿದ್ದರು. ಈಗ ಅದು ನಿಜ ಆಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅನುಶ್ರೀ ಅವರ ವಿವಾಹ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ವೇದಿಕೆ ಯಾವುದೇ ಇದ್ದರೂ ಅಂಜದೆ, ಅಳುಕದೆ ಆ್ಯಂಕರಿಂಗ್ ಮಾಡುವ ಸಾಮರ್ಥ್ಯ ಅವರಿಗೆ ಇದೆ. ಇನ್ನು ಸ್ಕ್ರಿಪ್ಟ್ ಅನ್ನೋದು ಅವರಿಗೆ ಬೇಕಾಗಿಯೇ ಇಲ್ಲ. ಅಷ್ಟು ಸುಂದರವಾಗಿ, ಮನರಂಜಾತ್ಮಕವಾಗಿ ಅವರು ಆ್ಯಂಕರಿಂಗ್ ಮಾಡ ಬಲ್ಲರು. ಈ ಕಾರಣದಿಂದಲೇ ಆ್ಯಂಕರಿಂಗ್ ಲೋಕದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಜೀ ಕನ್ನಡದ ಬಹುತೇಕ ಶೋಗಳಿಗೆ ಅವರದ್ದೇ ನಿರೂಪಣೆ ಇರುತ್ತದೆ. ಈಗ ಅವರು ಮದುವೆ ಆಗುತ್ತಿದ್ದಾರೆ ಎಂಬ ವಿಚಾರ ಹೊರ ಬಿದ್ದಿದೆ.

ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್ಆಗಿ ನೆರವೇರಲಿದೆ ಎನ್ನಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!