ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!

ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು.
ಇವತ್ತು ಪೇಟಿಎಂ, ಫೋನ್ಪೇ, ಗೂಗಲ್ ಪೇ ಇತ್ಯಾದಿ ಯುಪಿಐ ಪ್ಲಾಟ್ಫಾರ್ಮ್ಗಳು ಜನರ ದೈನಂದಿನ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ ಸಾಧನಗಳಾಗಿವೆ. ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ ವಸ್ತುಗಳನ್ನು ಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಪೇಮೆಂಟ್ವರೆಗೆ ಪ್ರತಿಯೊಂದಕ್ಕೂ ಯುಪಿಐ ಬಳಕೆ ಹೆಚ್ಚಾಗಿದೆ. ಈ ಯುಪಿಐ ಬಳಸಬೇಕೆಂದರೆ ಮೊಬೈಲ್ನಲ್ಲಿ ಇಂಟರ್ನೆಟ್ ಕನೆಕ್ಟಿವಿಟಿ ಇರಬೇಕು. ಬೇರೆ ಬೇರೆ ಕಾರಣಗಳಿಗೆ ಇಂಟರ್ನೆಟ್ ಸಂಪರ್ಕ ಸಾಧ್ಯವಾಗದೇ ಹೋಗಬಹುದು ಅಥವಾ ಕೈಕೊಡಬಹುದು. ಅಂತಹ ಸಂದರ್ಭದಲ್ಲಿ ಆನ್ಲೈನ್ನಲ್ಲಿ ಹಣ ಪಾವತಿ ಹೇಗೆ?
ಎನ್ಪಿಸಿಐ ಈ ಸಮಸ್ಯೆಗೆ ಪರಿಹಾರ ಹುಡುಕಿದೆ. ಇಂಟರ್ನೆಟ್ ಅಗತ್ಯ ಇಲ್ಲದೇ ಯುಪಿಐ ಪಾವತಿ ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ರೂಪಿಸಿದೆ. ಅದು ಯುಎಸ್ಎಸ್ಡಿ ಮುಖಾಂತರ ಹಣ ಪಾವತಿಸುವ ಹೊಸ ಕ್ರಮ.
ಯುಪಿಐ ಬಳಕೆದಾರರು ತಮ್ಮ ನೊಂದಾಯಿತ ಮೊಬೈಲ್ ನಂಬರ್ನಿಂದ ಅಧಿಕೃತ ಯುಎಸ್ಎಸ್ಡಿ ಕೋಡ್ ಆದ *99# ಅನ್ನು ಡಯಲ್ ಮಾಡಿದಾಗ ವಿವಿಧ ಬ್ಯಾಂಕಿಂಗ್ ಸೇವೆಗಳಿಗೆ ಅವಕಾಶ ಸಿಗುತ್ತದೆ. ಹಣ ರವಾನಿಸುವುದು, ಅಕೌಂಟ್ ಬ್ಯಾಲನ್ಸ್ ಪರಿಶೀಲಿಸುವುದು, ಯುಪಿಐ ಪಿನ್ ಬದಲಿಸುವುದು ಇತ್ಯಾದಿ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಪಡೆಯಬಹುದು.
ಯುಎಸ್ಎಸ್ಡಿ ಕೋಡ್ ಮೂಲಕ ಹಣ ಪಾವತಿಸುವ ಕ್ರಮ ಹೇಗೆ?
• ಬ್ಯಾಂಕ್ನೊಂದಿಗೆ ನೊಂದಾಯಿತವಾಗಿರುವ ಮೊಬೈಲ್ ನಂಬರ್ನಿಂದ *99# ಅನ್ನು ಡಯಲ್ ಮಾಡಿ.
• ಇದು ಐವಿ ಕಾಲ್ ಆಗಿದ್ದು, ನಿಮಗೆ ಬೇಕಾದ ಭಾಷೆ ಆಯ್ಕೆ ಮಾಡಿಕೊಳ್ಳಿ.
• ಹಣ ರವಾನೆ, ಬಾಕಿ ಹಣ ಪರಿಶೀಲನೆ, ವಹಿವಾಟು ವಿವರ ವೀಕ್ಷಣೆ ಇತ್ಯಾದಿ ಸೌಲಭ್ಯಗಳಲ್ಲಿ ನಿಮಗೆ ಬೇಕಾದ್ದನ್ನು ಆಯ್ದುಕೊಳ್ಳಬಹುದು.
• ಹಣ ಕಳುಹಿಸಬೇಕೆಂದಿದ್ದರೆ ‘1’ ಅನ್ನು ಟೈಪ್ ಮಾಡಬಹುದು. ಬಳಿಕ ಸೆಂಡ್ ಅನ್ನು ಒತ್ತಿರಿ.
• ಆಗ ಮೊಬೈಲ್ ನಂಬರ್, ಯುಪಿಐ ಐಡಿ, ಮೊಬೈಲ್ನಲ್ಲಿ ಸೇವ್ ಆಗಿರುವ ಕಾಂಟ್ಯಾಕ್ಟ್ ಇತ್ಯಾದಿ ಹಣ ಕಳುಹಿಸುವ ವಿಧಾನಗಳ ಆಯ್ಕೆ ಇರುತ್ತದೆ.
ಯಾವುದಾದರೊಂದನ್ನು ಆಯ್ದುಕೊಂಡು, ಸೆಂಡ್ ಒತ್ತಿರಿ.
• ಮೊಬೈಲ್ ನಂಬರ್ ಅನ್ನು ನೀವು ಆಯ್ದುಕೊಂಡರೆ ಆಗ ನೀವು ಹಣ ಕಳುಹಿಸಬೇಕಾದ ವ್ಯಕ್ತಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಯುಪಿಐ ಐಡಿ ಆಯ್ಕೆ ಮಾಡಿಕೊಂಡಿದ್ದರೆ ಆಗ ಆ ವ್ಯಕ್ತಿಯ ಯುಪಿಐ ಐಡಿಯನ್ನು ನಮೂದಿಸಬೇಕಾಗುತ್ತದೆ.
• ಈಗ ಎಷ್ಟು ಹಣ ಪಾವತಿಸಬೇಕು, ಆ ಮೊತ್ತವನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಆ ಹಣ ಪಾವತಿ ಯಾಕೆಂದು ನೀವು ವಿವರ ಬರೆಯುವ ಅವಕಾಶ ಇರುತ್ತದೆ. ಇದು ಅನಗತ್ಯ ಎನಿಸಿದರೆ ನಿರ್ಲಕ್ಷಿಸಬಹುದು.
• ಈಗ ಕೊನೆಯ ಕ್ರಮವಾಗಿ ನೀವು ನಿಮ್ಮ ಯುಪಿಐ ಪಿನ್ ನಂಬರ್ ಅನ್ನು ಎಂಟ್ರ ಮಾಡಬೇಕು. ಆಗ ಹಣ ರವಾನೆ ಕಾರ್ಯ ಪೂರ್ಣಗೊಳ್ಳುವುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!