ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!

ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು.
ಇವತ್ತು ಪೇಟಿಎಂ, ಫೋನ್ಪೇ, ಗೂಗಲ್ ಪೇ ಇತ್ಯಾದಿ ಯುಪಿಐ ಪ್ಲಾಟ್ಫಾರ್ಮ್ಗಳು ಜನರ ದೈನಂದಿನ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ ಸಾಧನಗಳಾಗಿವೆ. ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ ವಸ್ತುಗಳನ್ನು ಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಪೇಮೆಂಟ್ವರೆಗೆ ಪ್ರತಿಯೊಂದಕ್ಕೂ ಯುಪಿಐ ಬಳಕೆ ಹೆಚ್ಚಾಗಿದೆ. ಈ ಯುಪಿಐ ಬಳಸಬೇಕೆಂದರೆ ಮೊಬೈಲ್ನಲ್ಲಿ ಇಂಟರ್ನೆಟ್ ಕನೆಕ್ಟಿವಿಟಿ ಇರಬೇಕು. ಬೇರೆ ಬೇರೆ ಕಾರಣಗಳಿಗೆ ಇಂಟರ್ನೆಟ್ ಸಂಪರ್ಕ ಸಾಧ್ಯವಾಗದೇ ಹೋಗಬಹುದು ಅಥವಾ ಕೈಕೊಡಬಹುದು. ಅಂತಹ ಸಂದರ್ಭದಲ್ಲಿ ಆನ್ಲೈನ್ನಲ್ಲಿ ಹಣ ಪಾವತಿ ಹೇಗೆ?
ಎನ್ಪಿಸಿಐ ಈ ಸಮಸ್ಯೆಗೆ ಪರಿಹಾರ ಹುಡುಕಿದೆ. ಇಂಟರ್ನೆಟ್ ಅಗತ್ಯ ಇಲ್ಲದೇ ಯುಪಿಐ ಪಾವತಿ ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ರೂಪಿಸಿದೆ. ಅದು ಯುಎಸ್ಎಸ್ಡಿ ಮುಖಾಂತರ ಹಣ ಪಾವತಿಸುವ ಹೊಸ ಕ್ರಮ.
ಯುಪಿಐ ಬಳಕೆದಾರರು ತಮ್ಮ ನೊಂದಾಯಿತ ಮೊಬೈಲ್ ನಂಬರ್ನಿಂದ ಅಧಿಕೃತ ಯುಎಸ್ಎಸ್ಡಿ ಕೋಡ್ ಆದ *99# ಅನ್ನು ಡಯಲ್ ಮಾಡಿದಾಗ ವಿವಿಧ ಬ್ಯಾಂಕಿಂಗ್ ಸೇವೆಗಳಿಗೆ ಅವಕಾಶ ಸಿಗುತ್ತದೆ. ಹಣ ರವಾನಿಸುವುದು, ಅಕೌಂಟ್ ಬ್ಯಾಲನ್ಸ್ ಪರಿಶೀಲಿಸುವುದು, ಯುಪಿಐ ಪಿನ್ ಬದಲಿಸುವುದು ಇತ್ಯಾದಿ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಪಡೆಯಬಹುದು.
ಯುಎಸ್ಎಸ್ಡಿ ಕೋಡ್ ಮೂಲಕ ಹಣ ಪಾವತಿಸುವ ಕ್ರಮ ಹೇಗೆ?
• ಬ್ಯಾಂಕ್ನೊಂದಿಗೆ ನೊಂದಾಯಿತವಾಗಿರುವ ಮೊಬೈಲ್ ನಂಬರ್ನಿಂದ *99# ಅನ್ನು ಡಯಲ್ ಮಾಡಿ.
• ಇದು ಐವಿ ಕಾಲ್ ಆಗಿದ್ದು, ನಿಮಗೆ ಬೇಕಾದ ಭಾಷೆ ಆಯ್ಕೆ ಮಾಡಿಕೊಳ್ಳಿ.
• ಹಣ ರವಾನೆ, ಬಾಕಿ ಹಣ ಪರಿಶೀಲನೆ, ವಹಿವಾಟು ವಿವರ ವೀಕ್ಷಣೆ ಇತ್ಯಾದಿ ಸೌಲಭ್ಯಗಳಲ್ಲಿ ನಿಮಗೆ ಬೇಕಾದ್ದನ್ನು ಆಯ್ದುಕೊಳ್ಳಬಹುದು.
• ಹಣ ಕಳುಹಿಸಬೇಕೆಂದಿದ್ದರೆ ‘1’ ಅನ್ನು ಟೈಪ್ ಮಾಡಬಹುದು. ಬಳಿಕ ಸೆಂಡ್ ಅನ್ನು ಒತ್ತಿರಿ.
• ಆಗ ಮೊಬೈಲ್ ನಂಬರ್, ಯುಪಿಐ ಐಡಿ, ಮೊಬೈಲ್ನಲ್ಲಿ ಸೇವ್ ಆಗಿರುವ ಕಾಂಟ್ಯಾಕ್ಟ್ ಇತ್ಯಾದಿ ಹಣ ಕಳುಹಿಸುವ ವಿಧಾನಗಳ ಆಯ್ಕೆ ಇರುತ್ತದೆ.
ಯಾವುದಾದರೊಂದನ್ನು ಆಯ್ದುಕೊಂಡು, ಸೆಂಡ್ ಒತ್ತಿರಿ.
• ಮೊಬೈಲ್ ನಂಬರ್ ಅನ್ನು ನೀವು ಆಯ್ದುಕೊಂಡರೆ ಆಗ ನೀವು ಹಣ ಕಳುಹಿಸಬೇಕಾದ ವ್ಯಕ್ತಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಯುಪಿಐ ಐಡಿ ಆಯ್ಕೆ ಮಾಡಿಕೊಂಡಿದ್ದರೆ ಆಗ ಆ ವ್ಯಕ್ತಿಯ ಯುಪಿಐ ಐಡಿಯನ್ನು ನಮೂದಿಸಬೇಕಾಗುತ್ತದೆ.
• ಈಗ ಎಷ್ಟು ಹಣ ಪಾವತಿಸಬೇಕು, ಆ ಮೊತ್ತವನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಆ ಹಣ ಪಾವತಿ ಯಾಕೆಂದು ನೀವು ವಿವರ ಬರೆಯುವ ಅವಕಾಶ ಇರುತ್ತದೆ. ಇದು ಅನಗತ್ಯ ಎನಿಸಿದರೆ ನಿರ್ಲಕ್ಷಿಸಬಹುದು.
• ಈಗ ಕೊನೆಯ ಕ್ರಮವಾಗಿ ನೀವು ನಿಮ್ಮ ಯುಪಿಐ ಪಿನ್ ನಂಬರ್ ಅನ್ನು ಎಂಟ್ರ ಮಾಡಬೇಕು. ಆಗ ಹಣ ರವಾನೆ ಕಾರ್ಯ ಪೂರ್ಣಗೊಳ್ಳುವುದು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು