ಇಂದು ಮುಂಜಾನೆ ರಿಲೀಸ್ ಆದ ಅಲ್ಲು ಅರ್ಜುನ್ ; ಮೊದಲ ರಿಯಾಕ್ಷನ್

ಹೈದರಾಬಾದ್ :- ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರೋ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಈಗ ಅವರು ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ ಇಂದು ಮುಂಜಾನೆ ರಿಲೀಸ್ ಆದ ಅವರು, ಪೊಲೀಸ್ ಭಧ್ರತೆಯೊಂದಿಗೆ ನೇರವಾಗಿ ಮನೆ ಸೇರಿದರು. ಅವರು ನಿವಾಸಕ್ಕೆ ಬಂದ ಬಳಿಕ ಮಾಧ್ಯಮಗಳಿಗೆ ರಿಯಾಕ್ಷನ್ ನೀಡಿದ್ದಾರೆ. ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳುವುದನ್ನು ಮರೆತಿಲ್ಲ. ಜೊತೆಗೆ ಕಾನೂನಿಗೆ ತಲೆ ಬಾಗೋದಾಗಿ ಹೇಳಿದ್ದಾರೆ.

‘ಅಭಿಮಾನಿಗಳಿಗೆ ಧನ್ಯವಾದ. ನಾನು ಆರಾಮಗಿದ್ದೇನೆ. ಆ ಬಗ್ಗೆ ಚಿಂತಿಸೋದು ಬೇಡ. ನಾನು ಕಾನೂನನ್ನು ಗೌರವಿಸುತ್ತೇನೆ. ನಾನು ತನಿಖೆಗೆ ಸಹಕರಿಸುತ್ತೇನೆ’ ಎಂದು ಅಲ್ಲು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಮೃತಪಟ್ಟ ರೇವತಿ ಕುಟುಂಬದವರ ಬಗ್ಗೆ ಮಾತನಾಡಲು ಮರೆತಿಲ್ಲ. ‘ನಾನು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಿನಿಮಾ ನೋಡಲು ಹೋದಾಗ ಈ ಘಟನೆ ನಡೆಯಿತು. ಅದು ಅಚಾನಕ್ಕಾಗಿ ಆಗಿದ್ದು. ಅದೊಂದು ಅಪಘಾತ’ ಎಂದಿದ್ದಾರೆ ಅಲ್ಲು ಅರ್ಜುನ್.
‘ಆ ರೀತಿ ಮಾಡಬೇಕು ಎಂಬ ಯಾವುದೇ ಉದ್ದೇಶ ಇರಲಿಲ್ಲ. ಅವರ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅದು ನನ್ನ ವೈಯಕ್ತಿಕ ನಿಯಂತ್ರಣದಲ್ಲಿ ಇರಲಿಲ್ಲ. ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. ನನ್ನದು ಮಾತ್ರವಲ್ಲದೆ, ನನ್ನ ಅಂಕಲ್ ಸಿನಿಮಾಗಳನ್ನೂ ಅಲ್ಲಿ ನೋಡಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ. ಸಾವಿನ ನಷ್ಟ ತುಂಬಲು ಸಾಧ್ಯವಿಲ್ಲ. ಆದರೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಅಲ್ಲು ಅರ್ಜುನ್ ಭರವಸೆ ನೀಡಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!