ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!