
ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.





