ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು