ಎಂಜಿನಿಯರ್ ನ ಹೊಸ ಪ್ರಯತ್ನ; ದೋಸೆ ಮಾಡೋದಕ್ಕೂ ಬಂತು ರೋಬೋಟ್!!!

ನಾವಿಂದು ತಂತ್ರಜ್ಞಾನದೊಂದಿಗೆ ಬೆಸೆದುಕೊಂಡಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಮೆಷಿನ್‌ಗಳದ್ದೇ ಕಾರುಬಾರು. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸಿದ್ದಾರೆ. ಥಿಂಡಿ ಎಂಬ ಹೆಸರಿನ ದೋಸೆ ತಯಾರಿಸುವ ಈ ರೋಬೋಟ್ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಮಯ ಉಳಿತಾಯದೊಂದಿಗೆ ಗರಿಗರಿ ದೋಸೆ ಮಾಡುವ ಈ ಮೆಷಿನ್‌ ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

 

ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಮನೆಕೆಲಸ ಹಾಗೂ ಆಫೀಸಿನ ಕೆಲಸ ನಿಭಾಯಿಸಿಕೊಂಡು ಹೋಗುವುದು ಕಷ್ಟ. ಹೀಗಾಗಿ. ಮಹಿಳೆಯರ ಅರ್ಧಕರ್ಧ ಕೆಲಸವನ್ನು ರೋಬೋಟ್‌ಗಳು ಮಾಡುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ ಹೆಚ್ಚಿನವರು ಮನೆಕೆಲಸಕ್ಕಾಗಿ ರೋಬೋಟ್‌ಗಳನ್ನು ಖರೀದಿಸುತ್ತಿರುವುದನ್ನು ನೋಡಿರಬಹುದು. ಇದೀಗ ದೋಸೆ ಮಾಡುವ ಸಮಯವನ್ನು ಉಳಿಸಲು ರೋಬೋಟ್ ಬಂದಿದೆ. ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಥಿಂಡಿ ಎಂಬ ಹೆಸರಿನ ಈ ರೋಬೋಟ್, ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಿ, ಕೆಲಸವನ್ನು ಸುಲಭವಾಗಿಸಲಿದೆ.

r/ Bengaluru ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಬೆಂಗಳೂರಿನ ಇಂಜಿನಿಯರ್ ಒಬ್ಬರು ಈ ಬಗ್ಗೆ ಬರೆದುಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಒಂದು ವೈಯಕ್ತಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಥಿಂಡಿ ಎಂಬ ರೋಬೋಟ್ ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಬಲ್ಲದು. ಇದು ಹಿಟ್ಟನ್ನು ಇದು ಹಿಟ್ಟನ್ನು ಸುರಿದು ಪ್ಯಾನ್ ಮೇಲೆ ಹರಡುತ್ತದೆ. ನನ್ನ ಕುಟುಂಬದ ಸದಸ್ಯರು ಅಡುಗೆ ಮಾಡುವುದನ್ನು ನೋಡಿದ ಬಳಿಕ ನಾನು ಈ ಬಗ್ಗೆ ಯೋಚಿಸಿದೆ. ಆ ಸಮಯದಲ್ಲಿ ನನಗೆ ಈ ಐಡಿಯಾ ಬಂದಿತು ಎಂದು ಹೇಳಿದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!