ಎಂಜಿನಿಯರ್ ನ ಹೊಸ ಪ್ರಯತ್ನ; ದೋಸೆ ಮಾಡೋದಕ್ಕೂ ಬಂತು ರೋಬೋಟ್!!!

ನಾವಿಂದು ತಂತ್ರಜ್ಞಾನದೊಂದಿಗೆ ಬೆಸೆದುಕೊಂಡಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಮೆಷಿನ್‌ಗಳದ್ದೇ ಕಾರುಬಾರು. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸಿದ್ದಾರೆ. ಥಿಂಡಿ ಎಂಬ ಹೆಸರಿನ ದೋಸೆ ತಯಾರಿಸುವ ಈ ರೋಬೋಟ್ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಮಯ ಉಳಿತಾಯದೊಂದಿಗೆ ಗರಿಗರಿ ದೋಸೆ ಮಾಡುವ ಈ ಮೆಷಿನ್‌ ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

 

ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಮನೆಕೆಲಸ ಹಾಗೂ ಆಫೀಸಿನ ಕೆಲಸ ನಿಭಾಯಿಸಿಕೊಂಡು ಹೋಗುವುದು ಕಷ್ಟ. ಹೀಗಾಗಿ. ಮಹಿಳೆಯರ ಅರ್ಧಕರ್ಧ ಕೆಲಸವನ್ನು ರೋಬೋಟ್‌ಗಳು ಮಾಡುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ ಹೆಚ್ಚಿನವರು ಮನೆಕೆಲಸಕ್ಕಾಗಿ ರೋಬೋಟ್‌ಗಳನ್ನು ಖರೀದಿಸುತ್ತಿರುವುದನ್ನು ನೋಡಿರಬಹುದು. ಇದೀಗ ದೋಸೆ ಮಾಡುವ ಸಮಯವನ್ನು ಉಳಿಸಲು ರೋಬೋಟ್ ಬಂದಿದೆ. ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಥಿಂಡಿ ಎಂಬ ಹೆಸರಿನ ಈ ರೋಬೋಟ್, ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಿ, ಕೆಲಸವನ್ನು ಸುಲಭವಾಗಿಸಲಿದೆ.

r/ Bengaluru ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಬೆಂಗಳೂರಿನ ಇಂಜಿನಿಯರ್ ಒಬ್ಬರು ಈ ಬಗ್ಗೆ ಬರೆದುಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಒಂದು ವೈಯಕ್ತಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಥಿಂಡಿ ಎಂಬ ರೋಬೋಟ್ ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಬಲ್ಲದು. ಇದು ಹಿಟ್ಟನ್ನು ಇದು ಹಿಟ್ಟನ್ನು ಸುರಿದು ಪ್ಯಾನ್ ಮೇಲೆ ಹರಡುತ್ತದೆ. ನನ್ನ ಕುಟುಂಬದ ಸದಸ್ಯರು ಅಡುಗೆ ಮಾಡುವುದನ್ನು ನೋಡಿದ ಬಳಿಕ ನಾನು ಈ ಬಗ್ಗೆ ಯೋಚಿಸಿದೆ. ಆ ಸಮಯದಲ್ಲಿ ನನಗೆ ಈ ಐಡಿಯಾ ಬಂದಿತು ಎಂದು ಹೇಳಿದ್ದಾರೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!