ಏಳು ವರ್ಷಗಳ ಬಳಿಕ ಐಪಿಎಲ್ ನೆಲದಲ್ಲಿ ಅರ್ಧಶತಕ ಭಾರಿಸಿದ ಕನ್ನಡಿಗ ಕರುಣ್ ನಾಯರ್…..

ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್ಗಳಲ್ಲಿ 193 ರನ್ಗಳಿಸಿ ಆಲೌಟ್ ಆದರು. ಆದರೆ ಈ ಚೇಸಿಂಗ್‌ಗೆ ಜೀವ ತುಂಬಿದ್ದು ಕರ್ನಾಟಕದ ಪುತ್ರ ಕರುನ್ ನಾಯರ್. 40 ಎಸೆತಗಳಲ್ಲಿ 12 ಫೋರ್ಗಳು ಹಾಗೂ ಐದು ಸಿಕ್ಸಸ್ ಗಳೊಂದಿಗೆ ಒಟ್ಟು 89ರನ್ಗಳನ್ನು ತಂಡಕ್ಕೆ ಕೊಡುಗೆಯಾಗಿ ನೀಡಿದರು. ಇಂಫಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ಇಂಪಾರ್ಟೆಂಟ್ ರೋಲ್ ನಿಭಾಯಿಸಿದರು. ಅಲ್ಲದೆ ಐಪಿಎಲ್ ನಲ್ಲಿ ಅವರ ಫಾಸ್ಟೆಸ್ಟ್ ಟಿ ಟ್ವೆಂಟಿ ಆಫ್ ಸೆಂಚುರಿಯನ್ನು ಸಹ ಸಿಡಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದ ಮೂಲಕ ಕರುಣ್ ನಾಯರ್ ಐಪಿಎಲ್ಗೆ ಕಂಬ್ಯಾಕ್ ಮಾಡಿದ್ದಾರೆ. ಈ ಕಂಬ್ಯಾಕ್ ಪಂದ್ಯದಲ್ಲೇ ಆಕರ್ಷಕ ಅರ್ಧಶತಕವನ್ನೂ ಸಹ ಬಾರಿಸಿದ್ದಾರೆ. ಅದು ಕೂಡ 7 ವರ್ಷಗಳ ಬಳಿಕ ಎಂಬುದೇ ಅಚ್ಚರಿ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 59 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ನಾಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಕರುಣ್ 5 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 89 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ನ ಹೊರತಾಗಿಯೂ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ರನ್ಗಳಿಂದ ಸೋಲೊಪ್ಪಿಕೊಂಡಿತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!