ಐವರು ನುಸುಳುಕೋರರನ್ನು ಕೊ*ದು ವೀರ ಮರಣವನ್ನಪ್ಪಿದ ಯೋಧ….

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮ ರಾಗಿದ್ದು, ಇವರು 2022 ಅಕ್ಟೋಬರ್ ನಲ್ಲಿ ಅಗ್ನಿವೀರ್ಗೆ ಆಯ್ಕೆಯಾಗಿ, ಮಹಾ ರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊ*ದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

ಮುರಳಿಯ ತಂದೆ ಶ್ರೀರಾಮ್ ನಾಯಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾ*ನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದು ಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯ ವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
ಮುರಳಿ ನಮಗೆ ಒಬ್ಬನೇ ಮಗ. ಅವನಿಗೆ ಕೇವಲ 23 ವರ್ಷ. ನಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ದೇಶ ಸೇವೆ ಮಾಡಲು ಸೇನೆಗೆ ಸೇರುವುದು ಅವನ ಗುರಿಯಾಗಿತ್ತು. ನನ್ನ ವಿರೋಧದ ನಡುವೆಯೂ ಅವನು ಸೇನೆಗೆ ಸೇರಿದ್ದ. ಕನಿಷ್ಠ ಒಂದು ವರ್ಷ ಸೇನಾ ಸಮವಸ್ತ್ರ ಧರಿಸಲು ಬಯಸಿದ್ದ ಅವನು ತನ್ನ ಆಸೆ ಈಡೇರೆಸಿಕೊಂಡಿದ್ದ. ನಿನ್ನೆ ಬೆಳಗ್ಗೆ 8 ಗಂಟೆಗೆ ನಮ್ಮೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದ ಎಂದು ತಿಳಿಸಿದರು.

ಭಾರತ ಮಾತೆಗಾಗಿ ಹಾಗೂ ದೇಶದ ರಕ್ಷಣೆಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧನನ್ನು ಸಮಸ್ತ ನಾಡು ಗೌರವಿಸುತ್ತಿದ್ದು, ಇವರ ತ್ಯಾಗ ಬಲಿದಾನವನ್ನು ಶ್ಲಾಘಿಸುವುದರ ಜೊತೆಗೆ ವೀರ ಯೋಧನ ಮರಣಕ್ಕೆ ಸಾಂತ್ವಾನವನ್ನು ಸೂಚಿಸುತ್ತಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!