
ಮುರಳಿಯ ತಂದೆ ಶ್ರೀರಾಮ್ ನಾಯಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾ*ನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದು ಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯ ವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
ಮುರಳಿ ನಮಗೆ ಒಬ್ಬನೇ ಮಗ. ಅವನಿಗೆ ಕೇವಲ 23 ವರ್ಷ. ನಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ದೇಶ ಸೇವೆ ಮಾಡಲು ಸೇನೆಗೆ ಸೇರುವುದು ಅವನ ಗುರಿಯಾಗಿತ್ತು. ನನ್ನ ವಿರೋಧದ ನಡುವೆಯೂ ಅವನು ಸೇನೆಗೆ ಸೇರಿದ್ದ. ಕನಿಷ್ಠ ಒಂದು ವರ್ಷ ಸೇನಾ ಸಮವಸ್ತ್ರ ಧರಿಸಲು ಬಯಸಿದ್ದ ಅವನು ತನ್ನ ಆಸೆ ಈಡೇರೆಸಿಕೊಂಡಿದ್ದ. ನಿನ್ನೆ ಬೆಳಗ್ಗೆ 8 ಗಂಟೆಗೆ ನಮ್ಮೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದ ಎಂದು ತಿಳಿಸಿದರು.

ಭಾರತ ಮಾತೆಗಾಗಿ ಹಾಗೂ ದೇಶದ ರಕ್ಷಣೆಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧನನ್ನು ಸಮಸ್ತ ನಾಡು ಗೌರವಿಸುತ್ತಿದ್ದು, ಇವರ ತ್ಯಾಗ ಬಲಿದಾನವನ್ನು ಶ್ಲಾಘಿಸುವುದರ ಜೊತೆಗೆ ವೀರ ಯೋಧನ ಮರಣಕ್ಕೆ ಸಾಂತ್ವಾನವನ್ನು ಸೂಚಿಸುತ್ತಿದ್ದಾರೆ.





